Webdunia - Bharat's app for daily news and videos

Install App

ತುಂಗಭದ್ರಾ ಡ್ಯಾಂಗೆ ಗೇಟ್‌ ಆಳವಡಿಕೆ ಕೆಲಸಕ್ಕೂ ಮುನ್ನಾ ಸಚಿವ ಜಮೀರ್ ಅಹ್ಮದ್ ಪೂಜೆ

Sampriya
ಬುಧವಾರ, 14 ಆಗಸ್ಟ್ 2024 (16:48 IST)
Photo Courtesy X
ಕೊಪ್ಪಳ:  ಜಿಲ್ಲೆಯ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ ಕೊಚ್ಚುಹೋಗಿರುವ 189ನೇ ಕ್ರಸ್ಟ್‌ಗೇಟ್ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣಕ್ಕೂ ಮುನ್ನಾ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪೂಜೆ ಸಲ್ಲಿಸಿದರು.

19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು ಅದರ ರಿಪೇರಿ ಕೆಲಸಕ್ಕೆ ಇಂದು ಬುಧವಾರ ಪೂಜೆ ನೆರವೇರಿಸುವ ಮೂಲಕ ಕೆಲಸಕ್ಕೆ ಚಾಲನೆ ನೀಡಲಾಯಿತು.

ಹೊಸ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿ ಇಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಆರಂಭವಾಗಿದೆ. ಕಳೆದ ಭಾನುವಾರ 19ನೇ ಕ್ರಸ್ಟ್ ಗೇಟ್ ಮುರಿದಿತ್ತು.

ಇನ್ನೂ ಗೇಟ್ ರಿಪೇರಿ ಮಾಡಲು ಅಣೆಕಟ್ಟಿನ ನೀರನ್ನು ಹಂತ ಹಂತವಾಗಿ ಹೊರಗಡೆ ಬಿಡುತ್ತಿದ್ದಾರೆ.  ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದ್ದು, ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಟಿಬಿ ಬೋರ್ಡ್ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ಸಮೀಪಕ್ಕೆ ಮಕ್ಕಳನ್ನು, ಜಾನುವಾರುಗಳು ಹೋಗದಂತೆ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments