Webdunia - Bharat's app for daily news and videos

Install App

ಸಂಯಮ ಕಳೆದುಕೊಂಡ ಸಚಿವ ಜಾರ್ಜ್...!

Webdunia
ಶುಕ್ರವಾರ, 21 ಅಕ್ಟೋಬರ್ 2016 (12:27 IST)

ಬೆಂಗಳೂರು: ಆರೋಪ ಹೊತ್ತು ಸಚಿವ ಸಂಪುಟದಿಂದ ಕೈಬಿಡಲ್ಪಟ್ಟಿದ್ದ ಕೆ.ಜೆ. ಜಾರ್ಜ್, ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದು ತಿಳಿದಿರುವ ವಿಷಯವೇ. ಆದರೆ ಅವರ ದುಡುಕು ಸ್ವಭಾವ, ಬೇಜವಬ್ದಾರಿ ಹೇಳಿಕೆ ಹಾಗೂ ವರ್ತನೆ ಮಾಧ್ಯಮ ಪ್ರತಿನಿಧಿಗಳ ಮುಂದೇ ಎದುರಾಗಿದ್ದು ವಿಪರ್ಯಾಸ. ಮಾಧ್ಯಮ ಪ್ರತಿನಿಧಿಗಳು ಜಾರ್ಜ್ ಅವರಿಗೆ ಕೇಳಿದ ಪ್ರಶ್ನೆಯೊಂದಕ್ಕೆ ಸಂಯಮ ಕಳೆದುಕೊಂಡು ಬೇಜವಾಬ್ದಾರಿಯಿಂದ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 

ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದ ನಂತರ, ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ವರೆಗೆ ನಿರ್ಮಿಸಲು ಉದ್ದೇಶಿಸಿರುವ ಉಕ್ಕಿನ ಸೇತುವೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು  ಗರಂ ಆದರು. ಉಕ್ಕಿನ ಸೇತುವೆಗೆ 400 ಕೋಟಿ ರು. ವೆಚ್ಚ ಹೆಚ್ಚಿಸಿರುವ ಬಗ್ಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುತ್ತೇವೊ, ಬಿಡುತ್ತೇವೊ ಅದರ ಉಸಾಬರಿ ನಿಮಗೇಕೆ? ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಏಕೆ ಮಾಡುತ್ತೀರಿ? ಅಗತ್ಯ ಬಿದ್ದರೆ ಅನುಮೋದನೆ ಪಡೆಯುತ್ತೇವೆ ಎಂದು ತಾವು ಸಚಿವ ಎನ್ನುವ ಸ್ಥಾನವನ್ನು ಮರೆತು ಪ್ರತಿಕ್ರಿಯಿಸಿದರು.

 

ಮಾಧ್ಯಮ ಸಣ್ಣ ವಿಷಯವನ್ನು ಸಹ ವೈಭವೀಕರಿಸಿ ಜನರ ಮುಂದಿಡುವುದು ಸರಿಯಲ್ಲ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪಾರದರ್ಶಕತೆ ಕಾಯ್ದೆ(ಕೆಟಿಟಿಪಿ) ಪ್ರಕಾರ ಯೋಜನಾ ವೆಚ್ಚದಲ್ಲಿ ಶೇ. 30ರಷ್ಟು ಹೆಚ್ಚಳ ಮಾಡಲು ಅವಕಾಶವಿದೆ. ಯೋಜನೆಗೆ ಅಗತ್ಯವಿರುವಷ್ಟು ಹಣ ಒದಗಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ನಾನು ಸಿದ್ಧನಿದ್ದೇನೆ. ಅದಕ್ಕೆ ಹೇಗೆ ಅನುಮೋದನೆ ಪಡೆಯಬೇಕೆನ್ನುವು ನನಗೆ ಚೆನ್ನಾಗಿ ಗೊತ್ತು. ಯೋಜನಾ ವೆಚ್ಚದಲ್ಲಿ ಹೆಚ್ಚಳವಾಗಿರುವ ಕುರಿತು ನಿಮಗ್ಯಾಕೆ ಅಷ್ಟೊಂದು ಆಸಕ್ತಿ ಎಂದು ಅರ್ಥವಿಲ್ಲದ ಪ್ರಶ್ನೆಯನ್ನು ಮಾಧ್ಯಮ ಪ್ರತಿನಿಧಿಗಳಿಗೆ ಕೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments