Select Your Language

Notifications

webdunia
webdunia
webdunia
webdunia

ಸುದೀಪ್ ಬಗ್ಗೆ ಬೇಸರ ಹೊರಹಾಕಿದ ಸಚಿವ ಕೆ.ಎನ್.ರಾಜಣ್ಣ

ಸುದೀಪ್ ಬಗ್ಗೆ ಬೇಸರ ಹೊರಹಾಕಿದ ಸಚಿವ ಕೆ.ಎನ್.ರಾಜಣ್ಣ
ಬೆಂಗಳೂರು , ಮಂಗಳವಾರ, 20 ಜೂನ್ 2023 (11:33 IST)
ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನತಿಯಂತೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ ನಟ ಸುದೀಪ್ ಬಗ್ಗೆ ಸಚಿವ ಹಾಗೂ ವಾಲ್ಮೀಕಿ ಸಮುದಾಯದ ಮುಖಂಡ ಕೆ.ಎನ್ ರಾಜಣ್ಣ ಬೇಸರ ಹೊರಹಾಕಿದ್ದಾರೆ. ಸಿನಿಮಾ ನಟರು ರಾಜಕಾರಣ ಮಾಡಿದ ಗೌರವ ಕಳೆದುಕೊಳ್ಳುತ್ತಾರೆ ಎಂದಿದ್ದಾರೆ.
 
ಸುದೀಪ್ ಅವರು ನಮ್ಮದೇ ಸಮುದಾಯದವರು. ನಮ್ಮ ಸಮುದಾಯದ ನಾಯಕರ ವಿರುದ್ಧವೇ ಅವರು ಪ್ರಚಾರ ಮಾಡಿದರು. ಅವರೊಬ್ಬ ನಟನಾಗಿ, ನಟಿಸಬೇಕು. ಅದನ್ನು ಬಿಟ್ಟು ರಾಜಕೀಯ ಮಾಡುವುದು ಸರಿಯಲ್ಲ. ಅವರ ನಡೆ ನನಗೆ ಬೇಸರ ತರಿಸಿದೆ. ತಮ್ಮ ಕ್ಷೇತ್ರ ಬಿಟ್ಟು ಬಂದರೆ ಗೌರವ ಕಡಿಮೆ ಆಗುತ್ತದೆ ಎಂದು ರಾಜಣ್ಣ ಹೇಳಿದ್ದಾರೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸುದೀಪ್ ಬಿಜೆಪಿಯ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ವಾಲ್ಮೀಕಿ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡಿದ್ದರು. ಇದನ್ನು ರಾಜಣ್ಣ ಪ್ರಶ್ನಿಸಿದ್ದಾರೆ. ಈ ರೀತಿ ಮಾಡುವುದು ಸರಿಯಾದದ್ದು ಅಲ್ಲ ಎಂದು ಅವರು ಮಾತನಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಮುಂದೆ ಮಾತಾಡೋ ಧಮ್ ಇದ್ದಿದ್ದು ಯಡಿಯೂರಪ್ಪಗೆ ಮಾತ್ರ : ರಾಮಲಿಂಗಾ ರೆಡ್ಡಿ