Select Your Language

Notifications

webdunia
webdunia
webdunia
webdunia

ನೀರು ಬಿಡುವುದೆಂದರೆ ಅಂಗಡಿಯಿಂದ ತರಕಾರಿ ತಂದಂತಲ್ಲ: ಎಚ್‌ಡಿಕೆಗೆ ಟಾಂಗ್ ನೀಡಿದ ಕಾಗೋಡು

ನೀರು ಬಿಡುವುದೆಂದರೆ  ಅಂಗಡಿಯಿಂದ ತರಕಾರಿ ತಂದಂತಲ್ಲ: ಎಚ್‌ಡಿಕೆಗೆ ಟಾಂಗ್ ನೀಡಿದ ಕಾಗೋಡು
ಕೋಲಾರ , ಗುರುವಾರ, 25 ಆಗಸ್ಟ್ 2016 (11:55 IST)
ಕಾವೇರಿ ನದಿ ನೀರು ಹಂಚಿಕೆ ವಿರೋಧಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಟಾಂಗ್ ನೀಡಿರುವ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ನೀರು ಬಿಡುಗಡೆ ಮಾಡುವುದು  ಅಂಗಡಿಯಿಂದ ತರಕಾರಿ ತಂದಂತ್ತಲ್ಲ. ನೀವು ಮಾಜಿ ಮುಖ್ಯಮಂತ್ರಿಯಾಗಿ ಹೋರಾಟ ಮಾಡುವುದು ಸರಿಯಲ್ಲ ಎಂದರು.
 
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದು ಸೂಕ್ತವೆಂದು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು.
 
ಅಮ್ನೆಸ್ಟಿ ವಿಚಾರ.....
 
ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧದ ಧರಣಿಯನ್ನು ಬಿಟ್ಟು ಸಾರ್ವಜನಿಕರ ಸಮಸ್ಯಗಳ ವಿರುದ್ಧ ಹೋರಾಟ ನಡೆಸಲಿ ಎಂದರು. ರಾಜಕೀಯ ಉದ್ದೇಶಕ್ಕಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: 78 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ