Select Your Language

Notifications

webdunia
webdunia
webdunia
Friday, 11 April 2025
webdunia

ಕಾವೇರಿ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವ ಖಾದರ್ ಭೇಟಿ

ವಸತಿ
ಕೊಡಗು , ಗುರುವಾರ, 23 ಆಗಸ್ಟ್ 2018 (15:44 IST)
ಕಾವೇರಿ ಪ್ರವಾಹದಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದ ನಿವಾಸಿಗಳ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿದರು. ಸಂತ್ರಸ್ತರ ಸಮಸ್ಯೆ ಆಲಿಸಿದರು.

ಕುಶಾಲನಗರಕ್ಕೆ ವಸತಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿದರು. ಕಾವೇರಿ ಪ್ರವಾಹದಲ್ಲಿ ಮನೆ ಕಳೆದುಕೊಂಡ ನಿವಾಸಿಗಳ ವಸತಿ ಪ್ರದೇಶಗಳ ಪರಿಶೀಲನೆ ನಡೆಸಿದರು.

ಕುಶಾಲನಗರ ವ್ಯಾಪ್ತಿಯಲ್ಲಿ ಆರು ಎಕರೆ ಪ್ರದೇಶದಲ್ಲಿ 140 ಮಂದಿಗೆ ವಸತಿ ಸಮುಚ್ಛಯ ನಿರ್ಮಿಸುವ ಭರವಸೆಯನ್ನು ಸಂತ್ರಸ್ತರಿಗೆ ಸಚಿವ ಖಾದರ್ ನೀಡಿದರು.

ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸುವ ಭರವಸೆಯನ್ನು ಯು.ಟಿ. ಖಾದರ್ ನೀಡಿದರು. ಸರಕಾರ ಜನರ ಬೇಡಿಕೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುತ್ತದೆ ಎಂದು ಹೇಳಿದರು.






Share this Story:

Follow Webdunia kannada

ಮುಂದಿನ ಸುದ್ದಿ

ಕೊಡಗಿನಲ್ಲಿ ಹಿಂದಿನಂತೆ ಮಳೆ ಬೀಳೋದಿಲ್ಲ ಅಂತ ಹೇಳಿದವರಾರು ಗೊತ್ತಾ?