Webdunia - Bharat's app for daily news and videos

Install App

ಬ್ರಿಟಿಷರ ಗುಂಡಿಗೆ ಹೆದರದವರು ನಾವು, ಬಿಜೆಪಿಯವರಿಗೆ ಹೆದರ್ತೀವಾ: ಸಚಿವ ಕೆಜೆ ಜಾರ್ಜ್

Krishnaveni K
ಗುರುವಾರ, 18 ಜುಲೈ 2024 (11:42 IST)
ಬೆಂಗಳೂರು: ಬ್ರಿಟಿಷರ ಗುಂಡಿಗೇ ಹೆದರದ ಪಕ್ಷದವರು ನಾವು, ಇನ್ನು ಬಿಜೆಪಿಯವರ ಕುತಂತ್ರಗಳಿಗೆಲ್ಲಾ ಹೆದರುತ್ತೇವಾ? ಎಂದು ಇಂಧನ ಇಲಾಖೆ ಸಚಿವ ಕೆಜೆ ಜಾರ್ಜ್ ಪ್ರಶ್ನೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪ್ರತಿಭಟನೆ ವಿರುದ್ಧ ಆಕ್ರೋಶ ಹೊರಹಾಕಿದರು.

ವಾಲ್ಮೀಕಿ ಹಗರವನ್ನು ಮುಂದಿಟ್ಟುಕೊಂಡು ಬಿಜೆಪಿ ಸದನದ ಹೊರಗೆ ಮತ್ತು ಒಳಗೆ ಭಾರೀ ಪ್ರತಿಭಟನೆ ನಡೆಸುತ್ತಿದೆ. ಸದನದ ಒಳಗೆ ವಿಪಕ್ಷ ನಾಯಕ ಆರ್ ಅಶೋಕ್ ಆದಿಯಾಗಿ ಎಲ್ಲರೂ ಇದೇ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಕಳೆದ ಎರಡೂ ದಿನವೂ ಸದನದಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ.

ಇದು ಇಷ್ಟಕ್ಕೇ ನಿಂತಿಲ್ಲ. ಸದನ ಹೊರಗೂ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಇಂದೂ ಕೂಡಾ ಫ್ರಿಡಂ ಪಾರ್ಕ್ ನಲ್ಲಿ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ಬಗ್ಗೆ ಸಚಿವ ಕೆಜೆ ಜಾರ್ಜ್ ಬಳಿ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಬಿಜೆಪಿಯವರ ಕುತಂತ್ರಕ್ಕೆಲ್ಲಾ ನಾವು ಹೆದರಲ್ಲ ಎಂದಿದ್ದಾರೆ.

‘ಬಿಜೆಪಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಬೇರೆ ಪಕ್ಷಗಳ ಸಹಾಯ ಬೇಕಾಯಿತು. ಬ್ರಿಟಿಷರ ಗುಂಡಿಗೆ ಹೆದರದವರು ನಾವು. ಇವರ ಕುತಂತ್ರಕ್ಕೆಲ್ಲಾ ಹೆದರಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments