Webdunia - Bharat's app for daily news and videos

Install App

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಬಗ್ಗೆ ಸಚಿವ ಕೆಜೆ ಜಾರ್ಜ್ ಮಹತ್ವದ ಹೇಳಿಕೆ

Krishnaveni K
ಮಂಗಳವಾರ, 18 ಫೆಬ್ರವರಿ 2025 (21:49 IST)
ಬೆಂಗಳೂರು: ಇನ್ನೇನು ಬೇಸಿಗೆ ಆರಂಭವಾಗಿದ್ದು, ರಾಜ್ಯದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಶುರುವಾಗಿದೆ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಬಗ್ಗೆ ಇಂಧನ ಸಚಿವ ಕೆಜೆ ಜಾರ್ಜ್ ಮಹತ್ವದ ಮಾಹಿತಿ ನೀಡಿದ್ದಾರೆ.

ಇಂಧನ ಇಲಾಖೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆ ತ್ರೀ ಫೇಸ್ ಮತ್ತು ಮನೆ, ಕೈಗಾರಿಕಾ ಪ್ರದೇಶಗಳಿಗೆ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ಗುರಿಯಾಗಿದೆ ಎಂದಿದ್ದಾರೆ.

ಇಂದು ಬೆಂಗಳೂರಿನ ಕೆಲವೆಡೆ ಬಹುತೇಕ ದಿನವಿಡೀ ವಿದ್ಯುತ್ ಕಡಿತವಾಗಿತ್ತು. ಹೀಗಾಗಿ ಲೋಡ್ ಶೆಡ್ಡಿಂಗ್ ಬಗ್ಗೆ ಸಚಿವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಹೀಗಾಗಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಹಾಗಿದ್ದರೂ ಕೆಲವು ನಿರ್ವಹಣೆ, ರಿಪೇರಿ ಕೆಲಸಗಳಿಗಾಗಿ ಕೆಲವೆಡೆ ವಿದ್ಯುತ್ ಕಡಿತ ಮಾಡಬಹುದು ಎಂದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತದೆ. ಈ ಕಾರಣಕ್ಕೆ ಪಂಜಾಬ್, ಉತ್ತರ ಪ್ರದೇಶದಿಂದ ವಿದ್ಯುತ್ ಪಡೆಯಲಾಗುತ್ತದೆ. ರಾಜ್ಯದಲ್ಲಿ ಮಳೆಯಾಗಿ ವಿದ್ಯುತ್ ಉತ್ಪಾದನೆಯಾದಾಗ ಈ ರಾಜ್ಯಗಳಿಗೆ ಹಿಂದಿರುಗಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments