Honeytrap: ಪರ್ಸನಲ್ ಆಗಿ ಮಾತನಾಡಬೇಕು ಅಂತ ಬಂದವಳು ಸಚಿವ ಕೆಎನ್ ರಾಜಣ್ಣನನ್ನು ಕೇಳಿದ್ದೇನು

Krishnaveni K
ಮಂಗಳವಾರ, 25 ಮಾರ್ಚ್ 2025 (14:05 IST)
ಬೆಂಗಳೂರು: ಹನಿಟ್ರ್ಯಾಪ್ ಮಾಡಲು ಬಂದ ಯುವತಿಯರ ಬಗ್ಗೆ ಸಚಿವ ಕೆಎನ್ ರಾಜಣ್ಣ ಮಾಹಿತಿ ನೀಡಿದ್ದಾರೆ. ಪರ್ಸನಲ್ ಆಗಿ ಮಾತನಾಡಬೇಕು ಎಂದು ಬಂದವಳು ಮಾಡಿದ್ದೇನು ಎಂದು ಹೇಳಿದ್ದಾರೆ.

ತುಮಕೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಎನ್ ರಾಜಣ್ಣ ಹನಿಟ್ರ್ಯಾಪ್ ಬಗ್ಗೆ ಹಲವು ಮಾಹಿತಿ ಬಿಚ್ಚಿಟ್ಟಿದ್ದಾರೆ. ತಮ್ಮನ್ನು ಯುವತಿ ಎರಡು ಬಾರಿ ಮೀಟ್ ಮಾಡಲು ಬಂದಿದ್ದು ನಿಜ ಎಂದು ಹೇಳಿದ್ದಾರೆ. ಆಕೆಯ ವೇಷಭೂಷಣದ ಮಾಹಿತಿಯೂ ನೀಡಿದ್ದಾರೆ.

‘ನನ್ನನ್ನು ನೋಡಲು ಬಂದ ಯುವತಿ ಬ್ಲೂ ಜೀನ್ಸ್ ಹಾಕಿಕೊಂಡು ಬಂದಿದ್ದಳು. ಎರಡು ಬಾರಿ ಬಂದಾಗ ಹುಡುಗಿಯರು ಬೇರೆ ಬೇರೆ ಆಗಿದ್ದರು. ಎರಡನೇ ಬಾರಿ ಬಂದಾಗ ಹೈಕೋರ್ಟ್ ಲಾಯರ್ ಎಂದಿದ್ದಳು. ಮೊದಲ ಬಾರಿ ಹೇಳಿರಲಿಲ್ಲ’ ಎಂದಿದ್ದರು.

‘ನಂತರ ಬಂದವಳು ಪರ್ಸನಲ್ ಆಗಿ ನಿಮ್ಮ ಜೊತೆ ಗುಟ್ಟಾಗಿ ಮಾತನಾಡಬೇಕು ಎಂದಳು’ ಎಂದಿದ್ದಾರೆ. ಇನ್ನು ದೂರು ಯಾವಾಗ ಕೊಡ್ತೀರಿ ಎಂದಿದ್ದಕ್ಕೆ, ಇಷ್ಟು ದಿನ ಬ್ಯುಸಿಯಿದ್ದಿದ್ದರಿಂದ ದೂರು ಕೊಡಲು ಆಗಲಿಲ್ಲ. ಈವತ್ತು ಬೆಳಿಗ್ಗೆಯಿಂದ ಕೂತು ಬರೆದಿದ್ದೇನೆ. ಈವತ್ತೇ ಗೃಹಸಚಿವರು ಎಲ್ಲಿ ಇರುತ್ತಾರೋ ಅಲ್ಲೇ ಹೋಗಿ ದೂರು ಕೊಡುತ್ತೇನೆ ಎಂದಿದ್ದಾರೆ. ಹೀಗಾಗಿ ಹನಿಟ್ರ್ಯಾಪ್ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments