Webdunia - Bharat's app for daily news and videos

Install App

ರಸ್ತೆ ದುರಸ್ತಿ ಮಾಡಲು ಟ್ವೀಟ್ ಮಾಡಿ ಫಜೀತಿಗೊಳಗಾದ ಕೃಷ್ಣಭೈರೇಗೌಡರಿಂದ ಸ್ಪಷ್ಟನೆ

Krishnaveni K
ಶುಕ್ರವಾರ, 16 ಆಗಸ್ಟ್ 2024 (16:38 IST)
ಬೆಂಗಳೂರು: ರಸ್ತೆ ದುರಸ್ತಿ ಮಾಡಿ ಎಂದು ವಿಪಕ್ಷಗಳಿಂದ ಚಾಟಿ ಬೀಸಿಕೊಂಡು ಫಜೀತಿಗೊಳಗಾಗಿದ್ದ ಸಚಿವ ಕೃಷ್ಣಭೈರೇಗೌಡ ಈಗ ತಮ್ಮ ಟ್ವೀಟ್ ಗೆ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ವೀರಣ್ಣ ಪಾಳ್ಯದಿಂದ ಹೆಬ್ಬಾಳ ಕಡೆಗೆ ಸಾಗುವ ರಿಂಗ್ ರೋಡ್ ಸರ್ವಿಸ್ ರಸ್ತೆಯಲ್ಲಿ ರಸ್ತೆ ಹಳ್ಳ ಬಿದ್ದಿದೆ ಸರಿಪಡಿಸಿ ಎಂದು ಸಚಿವ ಕೃಷ್ಣಭೈರೇಗೌಡ ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಟ್ವೀಟ್ ಮಾಡಿದ್ದರು. ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಸ್ವತಃ ಸರ್ಕಾರದ ಸಚಿವರೇ ಅಧಿಕಾರಿಗಳಿಗೆ ಬೇಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದರೆ ಈ ಸರ್ಕಾರ ಯಾವ ಮಟ್ಟಿಗಿದೆ ಎಂದು ಲೇವಡಿ ಮಾಡಿದ್ದರು.

ಇದು ವಿವಾದವಾಗುತ್ತಿದ್ದಂತೇ ಈಗ ಕೃಷ್ಣಭೈರೇಗೌಡರು ಸ್ಪಷ್ಟನೆ ನೀಡಿದ್ದಾರೆ. ರಸ್ತೆ ದುರಸ್ತಿ ಮಾಡುವ ಕುರಿತಂತೆ ಅಧಿಕಾರಿಗಳ ಗಮನಕ್ಕೆ ತರಲು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದೆ. ಎಚ್ಚೆತ್ತುಕೊಂಡು ಜನರ ಕೆಲಸ ಮಾಡಲಿ ಎಂದು ನನ್ನ ಉದ್ದೇಶವಷ್ಟೇ ಎಂದಿದ್ದಾರೆ.

ಅಧಿಕಾರಿಗಳಿಗೆ ಫೋನ್, ಮೆಸೇಜ್ ಯಾವ ಮುಖಾಂತರವೂ ಸೂಚನೆ ಕೊಡಬಹುದು. ಆದರೆ ನಾನು ಸಾಮಾಜಿಕ ಜಾಲತಾಣದ ಮೂಲಕ ಸೂಚನೆ ಕೊಟ್ಟೆ. ಆದರೆ ಇದಕ್ಕೆ ಈಗ ವಿಪಕ್ಷಗಳು ನಾನಾ ರೀತಿಯ ಬಣ್ಣ ಕಟ್ಟುತ್ತಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಸಮಜಾಯಿಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments