Webdunia - Bharat's app for daily news and videos

Install App

ವಿಜಯಪುರದಲ್ಲಿ ವಕ್ಫ್ ಆಸ್ತಿ ಎಷ್ಟಿದೆ: ಶಾಕಿಂಗ್ ಸತ್ಯ ಬಹಿರಂಗಪಡಿಸಿದ ಸಚಿವ ಕೃಷ್ಣಭೈರೇಗೌಡ

Krishnaveni K
ಮಂಗಳವಾರ, 29 ಅಕ್ಟೋಬರ್ 2024 (10:45 IST)
ಬೆಂಗಳೂರು: ವಿಜಯಪುರದಲ್ಲಿ ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ವಿಚಾರ ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ. ಹಾಗಿದ್ದರೆ ಅಲ್ಲಿ ವಕ್ಫ್ ಬೋರ್ಡ್ ಒಟ್ಟು ಎಷ್ಟು ಆಸ್ತಿ ಹೊಂದಿದೆ ಎಂಬ ವಿಚಾರಗಳನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ ಈಗ ಬಹಿರಂಗಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಕಿ ಅಂಶ ಸಮೇತ ವಕ್ಫ್ ಬೋರ್ಡ್ ಮತ್ತು ಮುಸ್ಲಿಂ ಸಂಸ್ಥೆಗಳ ಅಧೀನದಲ್ಲಿರುವ ಆಸ್ತಿ ವಿವರ ಬಹಿರಂಗಪಡಿಸಿದ್ದಾರೆ. 1973-74 ರಲ್ಲಿ ವಿಜಯಪುರ ಜಿಲ್ಲೆಯಲ್ಲಿ ಒಟ್ಟು 14,201 ಎಕರೆ ವಕ್ಫ್ ಬೋರ್ಡ್ ಹೆಸರಿನಲ್ಲಿ ನೋಟಿಫಿಕೇಷನ್ ಆಗಿದೆ ಎಂದಿದ್ದಾರೆ.

ಈಗಾಗಲೇ ಪ್ರತಿಪಕ್ಷಗಳು ವಿಜಯಪುರದಲ್ಲಿ 15 ಸಾವಿರ ಎಕರೆ ವಕ್ಫ್ ಬೋರ್ಡ್ ತನ್ನದು ಎಂದು ಹೇಳಿಕೊಳ್ಳುತ್ತಿದೆ ಎಂದಿತ್ತು. ಇದು ಹೆಚ್ಚು ಕಡಿಮೆ ನಿಜವಾಗಿದೆ. ಆದರೆ 14,201 ಎಕರೆ ಪೈಕಿ 700 ಎಕರೆ ಮಾತ್ರ ವಕ್ಫ್ ಬೋರ್ಡ್ ಸ್ವಾಧೀನದಲ್ಲಿದೆ. ಉಳಿದ ಆಸ್ತಿಗಳು ಕೆಲವು ಮುಸ್ಲಿಂ ಸಂಸ್ಥೆಗಳ ಕೈವಶದಲ್ಲಿವೆ. ಕೆಲವು ಆಸ್ತಿ ಈದ್ಗಾ, ಕೆಲವು ದರ್ಗಾ ಆಗಿವೆ. ಉಳಿದಂತೆ 1319 ಎಕರೆ ಯಾವುದೇ ವೈಯಕ್ತಿಕ ಅನುಭೋಗದಲ್ಲಿಲ್ಲ.

ಇವುಗಳನ್ನು ಇಂದೀಕರಣ ಮಾಡಲು ತೀರ್ಮಾನಿಸಲಾಗಿದೆ. ಇದರಿಂದ ಯಾರಿಗೂ ಸಮಸ್ಯೆಯಾಗುವುದಿಲ್ಲ. 11,835 ಎಕರೆ ಉಳುವವನೇ ಭೂಮಿಯ ಒಡೆಯ ಅಡಿಯಲ್ಲಿ ಮಂಜೂರಾಗಿದೆ. ಬೇರೆ ಬೇರೆ ಯೋಜನೆಗಾಗಿ ಭೂ ಸ್ವಾದೀನ ಮಾಡಲಾಗಿದೆ. ಇದು ಯಾವುದಕ್ಕೂ ನೋಟಿಸ್ ಕೊಟ್ಟಿಲ್ಲ.ರೈತರಿಗೆ ಮಂಜೂರಾದ ಜಮೀನಿಗೆ ಯಾವುದೇ ನೋಟಿಸ್ ನೀಡಲ್ಲ. ಆದರೆ 121 ನೋಟಿಸ್ ನೀಡಿರುವುದು ನಿಜ ಎಂದಿದ್ದಾರೆ.

1977 ರಲ್ಲೇ ಹೊನವಾಡ ಗ್ರಾಮವನ್ನು ವಕ್ಫ್ ಬೋರ್ಡ್ ನಿಂದ ತೆಗೆದು ಹಾಕಲಾಗಿದೆ. ಹೊನವಾಡ ಗ್ರಾಮದಲ್ಲಿ ಕೇವಲ 11 ಎಕರೆ ವಕ್ಫ ಸ್ವಾಧೀನದಲ್ಲಿದೆ. ಈ ಗ್ರಾಮದ ಯಾರಿಗೂ ನೋಟಿಸ್ ನೀಡದಿದ್ದರೂ ಬೇಕೆಂದೇ ಗಲಭೆ ಹುಟ್ಟಿಸುವ ಉದ್ದೇಶದಿಂದ ಈಗ ಪ್ರತಿಪಕ್ಷದವರು ಇದನ್ನು ವಿವಾದ ಮಾಡುತ್ತಿದ್ದಾರೆ ಎಂದು ಕೃಷ್ಣಭೈರೇಗೌಡ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments