Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಂಫರ್ ಆಫರ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಂಫರ್ ಆಫರ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Sampriya

ಬೆಂಗಳೂರು , ಸೋಮವಾರ, 2 ಸೆಪ್ಟಂಬರ್ 2024 (18:53 IST)
ಬೆಂಗಳೂರು: ಈಗಾಗಲೇ ಗೃಹಲಕ್ಷ್ಮೀಯಿಂದ ಹಣಪಡೆಯುತ್ತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತ್ತೊಂದು ಬಹುಮಾನ ಗೆಲ್ಲುವ ಅವಕಾಶ ಅವಕಾಶ ಕಲ್ಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾಗಿರು ಗೃಹಲಕ್ಷ್ಮೀ ಜಾರಿಯಾಗಿ ವರ್ಷವಾಗಿದೆ. ಈ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಅವಕಾಶ ಕಲ್ಪಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಿಂದ ಏನೆಲ್ಲ ಬದಲಾವಣೆಯಾಗಿದೆ ಎಂಬುದನ್ನು ತಿಳಿಯಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ  ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಸೆಪ್ಟೆಂಬರ್ 30ರೊಳಗೆ ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆ ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ತಿಳಿಸಿದ್ದಾರೆ.

ಮೊದಲ 50 ಮನೆಯೊಡತಿಯರಿಗೆ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ. ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸೆ ತಪ್ಪಲ್ಲ, ಸದ್ಯ ಸಿಎಂ ಕುರ್ಚಿ ಖಾಲಿಯಿಲ್ಲ: ಡಿಕೆ ಶಿವಕುಮಾರ್