Webdunia - Bharat's app for daily news and videos

Install App

ಗೃಹಲಕ್ಷ್ಮಿ ಫಲಾನುಭವಿಗಳಿಗೆ ನವರಾತ್ರಿ ಗಿಫ್ಟ್: ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (13:21 IST)
ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನವರಾತ್ರಿ ಹಬ್ಬದ ಪ್ರಯುಕ್ತ ಗುಡ್ ನ್ಯೂಸ್ ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪ್ರತೀ ತಿಂಗಳು 2,000 ರೂ. ಅವರ ಬ್ಯಾಂಕ್ ಖಾತೆಗೆ ಜಮೆ ಮಾಡುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಅದರಂತೆ ಮನೆಯ ಯಜಮಾನಿಗೆ ಈ ಹಣ ಸಂದಾಯವಾಗುತ್ತದೆ. ಆದರೆ ಜುಲೈ ಮತ್ತು ಆಗಸ್ಟ್ ತಿಂಗಳ ಕಂತು ಇನ್ನೂ ಜಮೆಯಾಗಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ

ಇತ್ತೀಚೆಗಷ್ಟೇ ಮಾಧ್ಯಮಗಳ ಮುಂದೆ ಮಾತನಾಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಒಂದು ವಾರದಲ್ಲೇ ಹಣ ಜಮೆ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೆ ಹಣ ಖಾತೆಗೆ ಬಂದಿಲ್ಲ ಎಂದು ಜನ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಲೇ ಇದ್ದಾರೆ. ಈ ನಡುವೆ ಇಂದು ಮಾಧ್ಯಮಗಳಿಗೆ ಈ ಬಗ್ಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ಜುಲೈ ತಿಂಗಳ ಹಣ ಅಕ್ಟೋಬರ್ 7 ರಂದು ಸೋಮವಾರ ಮತ್ತು ಆಗಸ್ಟ್ ತಿಂಗಳ ಕಂತು ಅಕ್ಟೋಬರ್ 9 ರಂದು ಬುಧವಾರ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಎರಡು ದಿನಗಳಲ್ಲಿ 1ಕೋಟಿಗೂ ಅಧಿಕ ಮಹಿಳೆಯರ ಖಾತೆಗೆ 4 ಸಾವಿರ ರೂ. ಜಮೆ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments