Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಲೇಟ್ ಆಗೋದು ಯಾಕೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದು ಹೀಗೆ

Krishnaveni K
ಮಂಗಳವಾರ, 3 ಡಿಸೆಂಬರ್ 2024 (14:53 IST)
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಸರಿಯಾಗಿ ಕ್ರೆಡಿಟ್ ಆಗುವುದಿಲ್ಲ ಯಾಕೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ  ಒಳಾoಗಣ  ಕ್ರೀಡಾಂಗಣ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಈ ವೇಳೆ ಮಾಧ್ಯಗಳು ಯಾಕೆ ಗೃಹಲಕ್ಷ್ಮಿ ಹಣ ಆಯಾ ತಿಂಗಳು ಸರಿಯಾಗಿ ಕ್ರೆಡಿಟ್ ಆಗಲ್ಲ ಎಂದು ಸಚಿವರನ್ನು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಚಿವೆ, ನಿಮಗೆಲ್ಲರಿಗೂ ಐದನೇ ತಾರೀಖು ಸಂಬಳ ಎಂದರೆ ಐದನೇ ತಾರೀಖೇ ಥಟ್ಟಂತ ಆಗಿಬಿಡುತ್ತಾ? ಹಾಗೇ ಇದು ಎಂದು ಸಮಜಾಯಿಷಿ ಕೊಡಲು ಯತ್ನಿಸಿದ್ದಾರೆ.

ಆಗ ಮಾಧ್ಯಮ ಪ್ರತಿನಿಧಿಗಳು ನಮಗೆ ಐದನೇ ತಾರೀಖು ಎಂದರೆ ಐದನೇ ತಾರೀಖೇ ಆಗುತ್ತದೆ ಎಂದಿದ್ದಾರೆ. ಇದಕ್ಕೆ ಸಚಿವರು ಸರ್ಕಾರೀ ನೌಕರರಿಗೆ ಆಗಲ್ಲ. ಕೆಲವೊಮ್ಮೆ ಸರ್ಕಾರೀ ನೌಕರರಿಗೆ ಎರಡು ತಿಂಗಳ ವೇತನ ಬಾಕಿಯಿದ್ದು ಬಳಿಕ ಒಟ್ಟಿಗೇ ಕೊಡುವುದೂ ಇದೆ ಎಂದಿದ್ದಾರೆ. ಆದರೆ ಈ ವೇಳೆ ಮಾಧ್ಯಮಗಳು ಲಕ್ಷ್ಮೀ ಹೆಬ್ಬಾಳ್ಕರ್ ಕಾಲೆಳೆದಿದ್ದು ಹಾಗೂ ಆಗುತ್ತದಾ ಮೇಡಂ ಎಂದು ಪ್ರಶ್ನೆ ಮಾಡಿವೆ. ಆಗ ಸಚಿವರು ಈ ತಿಂಗಳು ಕೆಲಸ ಮಾಡಿದರೆ ನಿಮಗೆ ಮುಂದಿನ ತಿಂಗಳು ಸಂಬಳ ಆಗೋದಲ್ವಾ? ಅದೇ ರೀತಿ ಗೃಹಲಕ್ಷ್ಮಿ ಹಣವನ್ನು ಈ ತಿಂಗಳಿನದ್ದು ಮುಂದಿನ ತಿಂಗಳು ಹಾಕ್ತೀವೆ ಎಂದು ಸಮಜಾಯಿಷಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments