Webdunia - Bharat's app for daily news and videos

Install App

ಆಗೋಯ್ತು, ಇಷ್ಟೇ ದಿನ ಗೃಹಲಕ್ಷ್ಮಿ ಬಂದೇ ಬಿಡುತ್ತೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಸೋಮವಾರ, 3 ಮಾರ್ಚ್ 2025 (16:08 IST)
Photo Credit: X
ಬೆಂಗಳೂರು: ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಬಂದಿಲ್ಲ ಎನ್ನುವ ಆಕ್ರೋಶದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಷ್ಟೇ ದಿನ ಕೊಡಿ ಎಲ್ಲಾ ಕಂತು ಪಾವತಿಯಾಗುತ್ತದೆ ಎಂದಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಬಂದಿಲ್ಲ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ 2,000 ರೂ. ಸಂದಾಯವಾಗಬೇಕು. ಆದರೆ ಇದುವರೆಗೆ ಸಮರ್ಪಕವಾಗಿ ಹಣ ಬಂದಿಲ್ಲ.

ಹೀಗಾಗಿ ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದೇ ವಾರ ಎಲ್ಲರ ಖಾತೆಗೆ ಹಣ ಬಂದು ಬಿಡುತ್ತದೆ ಎಂದಿದ್ದರು. ಆದರೆ ಇನ್ನೂ ಎಲ್ಲರ ಖಾತೆಗೆ ಬಂದಿಲ್ಲ.

ಈ ಬಗ್ಗೆ ಮಾಧ್ಯಮಗಳು ಮತ್ತೆ ಸಚಿವೆಯನ್ನು ಪ್ರಶ್ನೆ ಮಾಡಿವೆ. ಈ ಬಗ್ಗೆ ಉತ್ತರಿಸಿರುವ ಅವರು ಇದೇ ವಾರದೊಳಗೆ ಎಲ್ಲರ ಖಾತೆಗೆ ಹಣ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ಕಂತಿನ ಹಣ ಇನ್ನೆರಡು ದಿನಗಳಲ್ಲಿ ಖಾತೆಗೆ ಬರಲಿದೆ. ಯಾವುದೇ ಕಾರಣಕ್ಕೂ ಮಿಸ್ ಮಾಡಲ್ಲ. ಇನ್ಮುಂದೆ ಪ್ರತೀ ತಿಂಗಳು ಹಣ ಹಾಕಲಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments