Webdunia - Bharat's app for daily news and videos

Install App

ಗೃಹಲಕ್ಷ್ಮಿ ಹಣ ಕ್ರೆಡಿಟ್ ಆಗುವ ಬಗ್ಗೆ ಮಹತ್ವದ ಮಾಹಿತಿ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Krishnaveni K
ಗುರುವಾರ, 28 ನವೆಂಬರ್ 2024 (20:11 IST)
ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಮನೆಯ ಯಜಮಾನಿಯರಿಗೆ ನೀಡಲಾಗುವ ಗೃಹಲಕ್ಷ್ಮಿ ಹಣ ಯಾವಾಗ ಕ್ರೆಡಿಟ್ ಆಗಲಿದೆ ಎಂಬ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಹಣ ಕ್ರೆಡಿಟ್ ಆಗುತ್ತದೆ. ಆದರೆ ಒಂದು ತಿಂಗಳ ಹಣ ಇನ್ನೂ ಜಮೆ ಆಗಿಲ್ಲ. ಕೇವಲ ಚುನಾವಣೆ ಇದ್ದಾಗ ಮಾತ್ರ ಮತದಾರರ ಸೆಳೆಯುವ ಉದ್ದೇಶದಿಂದ ಸರಿಯಾಗಿ ಹಣ ಕ್ರೆಡಿಟ್ ಮಾಡಲಾಗುತ್ತದೆ ಎಂಬ ಆರೋಪಗಳಿವೆ.

ಈ ಆರೋಪಗಳಿಗೆ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಒಂದು ತಿಂಗಳ ಹಣ ತಡವಾಗಿದೆ. ನೀವು ಹೇಳಿದ್ದು ನಿಜ. ಆದರೆ ನಾವು ಒಂದು ತಿಂಗಳ ಬಿಟ್ಟು ಒಂದು ತಿಂಗಳು ಹಾಕುತ್ತೇವೆ. ಇನ್ನೊಂದು ನಾಲ್ಕೈದು ದಿನಗಳಲ್ಲಿ ಹಣ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಆರೋಪ ಮಾಡುವವರು ಏನು ಮಾಡಿದ್ರೂ ಆರೋಪ ಮಾಡ್ತಾರೆ. ಎಲೆಕ್ಷನ್ ಟೈಮ್ ನಲ್ಲಿ ಹಣ ಹಾಕ್ತಾರೆ ಎಂದು ಆರೋಪಿಸುತ್ತಾರೆ. ಎಲೆಕ್ಷನ್ ಬಂದಾಗ ಮಾತ್ರ ಹಣ ಹಾಕುತ್ತೇವೆ ಎಂದೇನಿಲ್ಲ. ಈಗ ಎಲೆಕ್ಷನ್ ಏನೂ ಇಲ್ವಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments