Select Your Language

Notifications

webdunia
webdunia
webdunia
webdunia

ಮಹದಾಯಿ ವಿವಾದ: ವಕೀಲ ನಾರಿಮನ್ ಜೊತೆ ಸಚಿವ ಎಂ.ಬಿ. ಪಾಟೀಲ್‌ ಚರ್ಚೆ!

ಕನ್ನಡ ಪ್ರಾದೇಶಿಕ
ನವದೆಹಲಿ , ಶುಕ್ರವಾರ, 19 ಆಗಸ್ಟ್ 2016 (10:29 IST)
ಮಹದಾಯಿ ನ್ಯಾಯಾಧೀಕರಣದಿಂದ ರಾಜ್ಯಕ್ಕೆ ಹಿನ್ನೆಡೆ ಹಿನ್ನೆಲೆಯಲ್ಲಿ ಇಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಕರ್ನಾಟಕ ಪರ ವಕೀಲ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
 
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ನವದೆಹಲಿಯಲ್ಲಿರುವ ಕರ್ನಾಟಕ ಪರ ವಕೀಲರಾದ ನಾರಿಮನ ನಿವಾಸಕ್ಕೆ ತೆರಳಿ ಮುಂದಿನ ಕಾನೂನು ಹೋರಾಟದ ರೂಪರೇಷಗಳ ಕುರಿತು ಸಭೆ ನಡೆಸಿದ್ದಾರೆ. ಅಡ್ವಕೇಟ್ ಜನರಲ್ ಮಧುಸೂದನ ನಾಯ್ಕ ಸೇರಿದಂತೆ ಹಿರಿಯ ವಕೀಲರಾದ ಮೋಹನ ಕಾತರಕಿ ಸಭೆಯಲ್ಲಿ ಭಾಗಿಯಾಗಿದ್ದರು.
 
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು. 
 
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಾರಿ ಹಿನ್ನೆಡೆಯಾಗಿತ್ತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತು ಪ್ರತಿಕ್ರಿಯೆ ನೀಡಲು ಇಚ್ಚಿಸುವುದಿಲ್ಲ: ಬಿಎಸ್‌ವೈ