Webdunia - Bharat's app for daily news and videos

Install App

ಕಾರ್ ಅಪಘಾತ: ಪ್ರಾಣಾಪಾಯದಿಂದ ಪಾರಾದ ಸಚಿವ ಎಂ.ಬಿ. ಪಾಟೀಲ್

Webdunia
ಶನಿವಾರ, 14 ಜನವರಿ 2017 (10:25 IST)
ಜಲ ಸಂಪನ್ಮೂಲ ಖಾತೆ ಸಚಿವ ಎಂ.ಬಿ. ಪಾಟೀಲ್ ಅವರು ಪ್ರಯಾಣಿಸುತ್ತಿದ್ದ ಕಾರ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದ್ದು ಸಚಿವರು ಸೇರಿದಂತೆ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

 
ಸಚಿವ ಪಾಟೀಲ್ ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ನಡೆಯಲಿರುವ ಸಿದ್ಧರಾಮೇಶ್ವರ ಜಯಂತಿ ಉದ್ಘಾಟನೆಗೆ ಸಾಗುತ್ತಿದ್ದಾಗ ಕೆರೂರು ಸಮೀಪ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಘಟನೆ ನಡೆದಿದೆ. 
 
ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. 
 
ಸಚಿವರು, ಅವರ ಕಾರ್ ಚಾಲಕ ಶಂಕರ್, ಭದ್ರತಾ ಸಿಬ್ಬಂದಿ ಬಿ.ಮಹಾಂತೇಶ್, ಕಾಂಗ್ರೆಸ್ ಮುಖಂಡ ಸಿದ್ದಣ್ಣ ಸಕ್ರಿ, ಛಾಯಾಗ್ರಾಹಕ ಪ್ರಸನ್ನ ಪಾಟೀಲ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. 
 
ಘಟನೆ ಬಳಿಕ ಸಚಿವರು ಬೇರೆ ಕಾರಿನಲ್ಲಿ ಪ್ರಯಾಣಿಸಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments