Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಶ್ರೀಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ರಹಸ್ಯ ಚರ್ಚೆ

ಸಿದ್ದಗಂಗಾ ಶ್ರೀಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ರಹಸ್ಯ ಚರ್ಚೆ
ತುಮಕೂರು , ಗುರುವಾರ, 14 ಸೆಪ್ಟಂಬರ್ 2017 (20:17 IST)
ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್, ಸಿದ್ದಗಂಗಾ ಶ್ರೀಗಳೊಂದಿಗೆ ಕೆಲ ಕಾಲ ರಹಸ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಖಾಸಗಿ ಕಾರಿನಲ್ಲಿ ಭೇಟಿ ನೀಡಿದ ಸಚಿವ ಎಂ.ಬಿ.ಪಾಟೀಲ್, ಗೌಪ್ಯವಾಗಿ ಮಾತುಕತೆ ನಡೆಸಿರುವುದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಲ್ಲಿ ಕೋಲಾಹಲ ಉಂಟಾಗಿದೆ.
 
ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳೊಂದಿಗೆ ಕೆಲ ಕಾಲ ರಹಸ್ಯ ಮಾತುಕತೆ ನಡೆಸಿದ ನಂತರ, ಕಿರಿಯ ಸ್ವಾಮಿಜಿ ಸಿದ್ದರಿಂಗ ಶ್ರೀಗಳೊಂದಿಗೆ ಚರ್ಚಿಸಿದ ನಂತರ ಸಚಿವ ಪಾಟೀಲ್ ತೆರಳಿದರು ಎಂದು ಮೂಲಗಳು ತಿಳಿಸಿವೆ.
 
ಸಿದ್ದಗಂಗಾಶ್ರೀಗಳು ಪ್ರತ್ಯೇಕ ಲಿಂಗಾಯುತ ಧರ್ಮದ ಪರವಾಗಿದ್ದಾರೆ ಎಂದು ಹೇಳಿಕೆ ನೀಡಿ ಗೊಂದಲ ಸೃಷ್ಚಿಸಿದ್ದ ಸಚಿವ ಪಾಟೀಲ್, ಇದೀಗ ನಾಳೆ ಹೊಸ ಹೇಳಿಕೆಯನ್ನು ನೀಡುತ್ತಾರೆಯೋ ಎನ್ನುವುದನ್ನು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್‌ ಪಕ್ಷ ಮುಸ್ಲಿಂ ಸಮುದಾಯದ ವಿರೋಧಿ: ಜಮೀರ್