Webdunia - Bharat's app for daily news and videos

Install App

ಬರಗಾಲ ಎದುರಿಸಲು ಸಜ್ಜಾಗಿ, ನೀರು ಪೋಲು ಮಾಡದಂತೆ ಸಚಿವ ಮಧು ಬಂಗಾರಪ್ಪ ಮನವಿ

Sampriya
ಭಾನುವಾರ, 17 ಮಾರ್ಚ್ 2024 (10:23 IST)
Photo Courtesy Facebook
Photo Courtesy Facebook
ಹೊಸನಗರ: 128 ರ್ಷಗಳ ಬಳಿಕ ಮಲೆನಾಡು ಭೀಕರ ಬರಗಾಲವನ್ನು ಎದರಿಸಲಿದ್ದು ಸಾರ್ವಜನಿಕರು ಹಾಗೂ ಅಧಿಕಾರಿಗಳು ಸಜ್ಜಾಗಿರಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದರು. 
 
ಪಟ್ಟಣದ ಬಸ್ ನಿಲ್ದಾಣ ಆವರಣದಲ್ಲಿ ₹422 ಕೋಟಿ ವೆಚ್ಚದ ಹೊಸನಗರ ಪಟ್ಟಣ ಸೇರಿದಂತೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. 
 
ಮುಂಬರುವ ಮೂರು ತಿಂಗಳ ಬೇಸಿಗೆ ಕಾಲವನ್ನು ಎದುರಿಸಲು ಸರ್ಕಾರ ಸಾಕಷ್ಟು ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಆದರೆ ಜನರಿಗೆ ಈ ಬಗ್ಗೆ ಎಚ್ಚೆತ್ತು ನೀರನ್ನು ಪೋಲು ಮಾಡದಂತೆ ಎಚ್ಚರ ವಹಿಸಿ ಎಂದರು. 
 
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಮಕ್ಕಳಿಗೆ ನೀರು ಉಳಿಸುವ, ಸಂರಕ್ಷಣೆ ಕುರಿತಂತೆ ಪಠ್ಯದಲ್ಲಿ ಅಳವಡಿಸಬೇಕು. ನೀರಿನ ಸದ್ಬಳಕೆ ಮಕ್ಕಳ ಮನದ ಆಳಕ್ಕೆ ಇಳಿಸಿದರೆ ಅದರ ಫಲ ಮುಂದಿನ ದಿನಗಳಲ್ಲಿ ದೊರೆಯಬಲ್ಲದು ಎಂದು ಅರಿವು ಮೂಡಿಸಿದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments