Webdunia - Bharat's app for daily news and videos

Install App

ಆಸ್ತಿ ವಕ್ಫ್ ನದ್ದಾದರೆ ವಕ್ಫ್ ನದ್ದು, ಜನರದ್ದು ಆಗಿದ್ದರೆ ಜನರದ್ದು: ಸಚಿವ ಮಧು ಬಂಗಾರಪ್ಪ

Krishnaveni K
ಶುಕ್ರವಾರ, 22 ನವೆಂಬರ್ 2024 (13:45 IST)
ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿರುವ ಬಿಜೆಪಿ ವಿರುದ್ಧ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಆಸ್ತಿ ವಕ್ಫ್ ನದ್ದಾದರೆ ವಕ್ಫ್ ನದ್ದು, ಜನರದ್ದಾದರೆ ಜನರದ್ದು ಅದರಲ್ಲಿ ಗೊಂದಲವಿಲ್ಲ ಎಂದಿದ್ದಾರೆ.
 

ಮಾಧ್ಯಮಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ ‘ರೀ. ವಕ್ಫ್ ನದ್ದಾದರೆ ವಕ್ಫ್ ನದ್ದು, ಜನರ ಆಸ್ತಿಯಾಗಿದ್ದರೆ ಅವರಿಗೆ ಸೇರುತ್ತೆ. ಇವರದ್ದು ಆದರೆ ಇವರಿಗೆ ಅವರದ್ದು ಆದರೆ ಅವರಿಗೆ. ಯಾವು ಯಾವುದೋ ಜಮೀನನ್ನು ವಕ್ಫ್ ನದ್ದು ಎಂದು ಹೇಳಕ್ಕೆ ಬರಲ್ಲ. ಕಾನೂನಿಲ್ವಾ, ದಾಖಲೆಗಳಿಲ್ವಾ?’ ಎಂದು ಪ್ರಶ್ನೆ ಮಾಡಿದ್ದಾರೆ.

ವಕ್ಫ್ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಇದೆಲ್ಲಾ ಬಿಜೆಪಿಯವರು ಚುನಾವಣೆ ಸಮಯದಲ್ಲಿ ಒಂದೊಂದು ವಿಷಯ ಇಟ್ಟುಕೊಂಡು ವಿವಾದವೆಬ್ಬಿಸುತ್ತಿರುವುದಷ್ಟೇ. ವಕ್ಫ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಯಾರೂ ಬೇರೆಯವರ ಆಸ್ತಿಯನ್ನು ಕಬಳಿಕೆ ಮಾಡಿಲ್ಲ ಎಂದಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕಿದೆ. ಅದೇ ರೀತಿ ಬಿಜೆಪಿಯವರು ಮಾಡ್ತಿದ್ದಾರೆ. ಮಾಡಿಕೊಳ್ಳಲಿ ಬಿಡಿ ಪಾಪ. ಹಳ್ಳಿ ಹಳ್ಳಿಗೆ ಹೋಗಿ ಪ್ರತಿಭಟನೆ ಮಾಡಲಿ. ಯಾಕೆ ಮಾಡಲ್ಲ? ಬೆಂಗಳೂರಿನಲ್ಲಿ ಮಾತ್ರ ಯಾಕೆ ಮಾಡ್ತಾರೆ? ಇಲ್ಲಿ ಪಬ್ಲಿಸಿಟಿ ಜಾಸ್ತಿ ಸಿಗುತ್ತೆ ಅಂತಾನಾ? ಎಂದು ಮಧು ಬಂಗಾರಪ್ಪ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments