Webdunia - Bharat's app for daily news and videos

Install App

ರಾಜ್ಯೋತ್ಸವ ಆಚರಣೆ ವೇಳೆ ತಪ್ಪು ತಪ್ಪಾಗಿ ಕನ್ನಡ ಭಾಷಣ ಮಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Krishnaveni K
ಶುಕ್ರವಾರ, 1 ನವೆಂಬರ್ 2024 (13:27 IST)
Photo Credit: Instagram
ಬೆಂಗಳೂರು: 69 ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ಬೆಂಗಳೂರಿನ ಕಂಠೀರವ ಮೈದಾನದಲ್ಲಿ ನಡೆದಿದ್ದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಪ್ಪು ತಪ್ಪಾಗಿ ಕನ್ನಡ ಭಾಷಣ ಮಾಡಿದ್ದಾರೆ.

ಶಿಕ್ಷಣ ಸಚಿವರು ಕನ್ನಡ ಭಾಷೆ ಮಾತನಾಡಲು ಪರದಾಡಿದ್ದು ಈ ಮೊದಲೂ ನೋಡಿದ್ದೇವೆ. ಸದನದಲ್ಲೂ ತಪ್ಪು ತಪ್ಪಾಗಿ ಕನ್ನಡ ಓದಿದ್ದಾರೆ. ಇದೀಗ ರಾಜ್ಯೋತ್ಸವ ಕಾರ್ಯಕ್ರಮದಲ್ಲೂ ಭಾಷಣ ಮಾಡುವಾಗ ಕೆಲವೊಂದು ಶಬ್ಧಗಳನ್ನು ತಪ್ಪು ತಪ್ಪಾಗಿ ಉಚ್ಚರಿಸಿ ನಗೆಪಾಟಲಿಗೀಡಾಗಿದ್ದಾರೆ.

ಒಂದೆಡೆ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ ಕನ್ನಡ ನಾಡಿನಲ್ಲಿದ್ದುಕೊಂಡು ಕನ್ನಡ ಕಲಿಯುವ ಪ್ರತಿಜ್ಞೆ ಮಾಡಬೇಕು. ಕನ್ನಡಕ್ಕೆ ಅವಮಾನ ಮಾಡುವವರಿಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು. ಆದರೆ ಇತ್ತ ಶಿಕ್ಷಣ ಸಚಿವರೇ ತಪ್ಪಾಗಿ ಕನ್ನಡ ಉಚ್ಚರಿಸಿ ನಗೆಪಾಟಲಿಗೀಡಾಗಿದ್ದಾರೆ.

ಕನ್ನಡ ಶಾಲೆಯ ಉಳಿವಿಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುತ್ತಾ ಶಿಕ್ಷಣ ಸಚಿವರು, ಸಂಗತಿ ಎನ್ನುವುದಕ್ಕೆ ಸಂಗಾತಿ, ದುರಸ್ಥಿ ಎನ್ನುವುದಕ್ಕೆ ದುಸ್ಥಿತಿ ಎಂಬಿತ್ಯಾದಿ ಹಲವು ಪದ ಪ್ರಯೋಗಗಳನ್ನು ಮಾಡುವಾಗ ತಪ್ಪು ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Heavy Rain, ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಬಿಜೆಪಿ, ಆರ್‌ಎಸ್‌ಎಸ್ ನಡುವಿನ ಒಡನಾಟದ ಬಗ್ಗೆ ಮೋಹನ್ ಭಾಗವತ್ ಸ್ಫೋಟಕ ಮಾತು

ಇನ್‌ಸ್ಟಾಗ್ರಾಂನಲ್ಲಿ ವಿಚ್ಛೇಧನ ನೀಡಿ ಸುದ್ದಿಯಾಗಿದ್ದ ದುಬೈಗೆ ರಾಜಕುಮಾರಿಗೆ ಮತ್ತೇ ಮದುವೆ

ಧರ್ಮಸ್ಥಳ ಕೇಸ್ ಎಸ್‌ಐಟಿಗೆ ನೀಡಿದ ಹಿಂದಿನ ಉದ್ದೇಶ ಬಿಚ್ಚಿಟ್ಟ ಸಚಿವ ಎಂಬಿ ಪಾಟೀಲ್‌

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

ಮುಂದಿನ ಸುದ್ದಿ
Show comments