Select Your Language

Notifications

webdunia
webdunia
webdunia
webdunia

ಸಚಿವ ಮಹದೇವಪ್ಪ ಪುತ್ರನಿಗೆ ನನಗಿಂತ ಉತ್ತಮ ಹೆಸರಿದೆಯಾ: ಶ್ರೀನಿವಾಸ್ ಪ್ರಸಾದ್

ಸಚಿವ ಮಹದೇವಪ್ಪ ಪುತ್ರನಿಗೆ ನನಗಿಂತ ಉತ್ತಮ ಹೆಸರಿದೆಯಾ: ಶ್ರೀನಿವಾಸ್ ಪ್ರಸಾದ್
ಬೆಂಗಳೂರು , ಸೋಮವಾರ, 17 ಅಕ್ಟೋಬರ್ 2016 (16:38 IST)
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆಯುವ ಉಪಚುನಾವಣೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಣಕ್ಕಿಳಿಯುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ಸಚಿವ ಮಹದೇವಪ್ಪ ಹಾಗೂ ಅವರ ಪುತ್ರನಿಗೆ ನನಗಿಂತ ಉತ್ತಮ ಹೆಸರಿದ್ಯಾ ಎಂದು ಪ್ರಶ್ನಿಸಿದರು. 
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆಯುವ ಉಪಚುನಾವಣೆಯಲ್ಲಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಣಕ್ಕಿಳಿತುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
 
ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸುವ ಕುರಿತು ನಿನ್ನೆ ಖಾಸಗಿ ಹೊಟೇಲ್‌ನಲ್ಲಿ ಚರ್ಚೆ ಕೂಡ ನಡೆಸಲಾಗಿದೆ. ಸುನೀಲ್ ಬೋಸ್ ತಮ್ಮ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ನಂಜನಗೂಡು ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
 
ಸಭಾಪತಿ ಕೆ.ಬಿ. ಕೋಳಿವಾಡ್ ಅವರನ್ನು ಭೇಟಿಯಾಗಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯ ಲಾಭಕ್ಕಾಗಿ ಮೋದಿ ಸರಕಾರ "ತಲಾಕ್"ಗೆ ಮಣೆ: ಗುಲಾಮ್ ನಬಿ ಆಜಾದ್