Select Your Language

Notifications

webdunia
webdunia
webdunia
webdunia

ಸಚಿವ ಎಂ.ಬಿ.ಪಾಟೀಲ್ ಕಮಿಶನ್ ಏಜೆಂಟ್, ಭ್ರಷ್ಟಾಚಾರಿ: ಬಿಎಸ್‌ವೈ

ಸಚಿವ ಎಂ.ಬಿ.ಪಾಟೀಲ್ ಕಮಿಶನ್ ಏಜೆಂಟ್, ಭ್ರಷ್ಟಾಚಾರಿ: ಬಿಎಸ್‌ವೈ
ಬಾಗಲಕೋಟೆ , ಶನಿವಾರ, 2 ಡಿಸೆಂಬರ್ 2017 (13:47 IST)
ನೀರಾವರಿ ಖಾತೆ ಸಚಿವ ಎಂ.ಬಿ.ಪಾಟೀಲ್ ಕಮಿಶನ್ ಏಜೆಂಟ್, ಭ್ರಷ್ಟಚಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್ ನೀರಾವರಿ ಯೋಜನೆಗಳಲ್ಲಿ ಕಮಿಶನ್ ಪಡೆದಿದ್ದಾರೆ. ಭಾರಿ ಪ್ರಮಾಣದ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
 
ಸಚಿವ ಪಾಟೀಲ್‌ನಂತಹವನನ್ನು ತುಂಬಾ ಜನರನ್ನು ನೋಡಿದ್ದೇನೆ. ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಗುಡುಗಿದ್ದಾರೆ.
 
ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದ ಸಚಿವ ಪಾಟೀಲ್‌ಗೆ ಭ್ರಷ್ಟಾಚಾರದಿಂದ ಹಣ ಸಂಗ್ರಹಿಸಲು ಮುಕ್ತವಾಗಿ ಬಿಟ್ಟಿದ್ದಾರೆ. ಮುಂಬರುವ ಚುನಾವಣೆಗಾಗಿ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆಗಡುಕ ಸಚಿವನಿಗೆ ಸಿಎಂ ಸಿದ್ದರಾಮಯ್ಯ ರಕ್ಷಣೆ: ಯಡಿಯೂರಪ್ಪ