Webdunia - Bharat's app for daily news and videos

Install App

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Krishnaveni K
ಮಂಗಳವಾರ, 10 ಜೂನ್ 2025 (11:20 IST)
ಬೆಂಗಳೂರು: ಆರ್ ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಮೈದಾನದ ಬಳಿ ಕಾಲ್ತುಳಿತದಿಂದ 11 ಜನರ ಸಾವಿಗೆ ಯಾರು ಹೊಣೆ, ಯಾರು ಕಾರಣ ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ನೀಡಿರುವ ಉತ್ತರ ನೋಡಿ.

ಜೂನ್ 4 ರಂದು ಐಪಿಎಲ್ ಗೆದ್ದಿದ್ದ ಆರ್ ಸಿಬಿ ಟೀಂ ಬೆಂಗಳೂರಿಗೆ ಬಂದು ವಿಜಯೋತ್ಸವ ಆಚರಿಸುವ ವೇಳೆ ಚಿನ್ನಸ್ವಾಮಿ ಮೈದಾನದ ಬಳಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸರ್ಕಾರವೇ ಹೊಣೆ ಎಂದು ವಿಪಕ್ಷಗಳು, ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಇತ್ತ ಸರ್ಕಾರ ನಮ್ಮ ತಪ್ಪಿಲ್ಲ, ಪೊಲೀಸರು ಭದ್ರತೆ ಕೊಡುವಲ್ಲಿ  ವಿಫಲರಾದರು ಎಂದು ಗೂಬೆಕೂರಿಸುತ್ತಿದೆ.

ಈ ಬಗ್ಗೆ ಇಂದು ಸಚಿವ ಎಂಬಿ ಪಾಟೀಲ್ ರನ್ನು ಮಾಧ್ಯಮಗಳು ಪ್ರಶ್ನೆ ಮಾಡಿವೆ. ದುರಂತಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದಾಗ ಅವರು ಹೇಳಿದ್ದು ಹೀಗೆ. ‘ಇದು ಯಾರೊಬ್ಬರೂ ಊಹೆ ಮಾಡಿರಲಿಲ್ಲ. ಪ್ರವಾಹ ಎಲ್ಲಾ ಬಂದಾಗ ಆದ ಹಾಗೆ ಆಗಿರೋದು. ಉತ್ತರ ಪ್ರದೇಶದಲ್ಲಿ ಕುಂಬಮೇಳದಲ್ಲಿ ಆಗಿತ್ತಲ್ಲಾ. 120 ಜನ ಪ್ರಾಣ ಕಳೆದುಕೊಂಡರು. ಇದು ಎಲ್ಲವೂ ನೋವಿನ ಘಟನೆ. ಏನೇ ಮಾಡಿದರೂ ಜೀವ ವಾಪಸ್ ಬರಲ್ಲ.

ಏನಾಗಿದೆ, ಯಾಕಾಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಯಾಕೆ ಗೊಂದಲ ಆಯಿತು ಎನ್ನುವುದು ತನಿಖೆಯಿಂದ ತಿಳಿದುಬರಲಿದೆ. ಸರ್ಕಾರ ಎಲ್ಲಿ ಎಡವಿತು ಎಂದು ನಾನೇ ಹೇಗೆ ಹೇಳಕ್ಕೆ ಆಗುತ್ತದೆ.  ಸಿಐಡಿ ತನಿಖೆ ಆಗ್ತಿದೆಯಲ್ಲಾ ಗೊತ್ತಾಗುತ್ತದೆ. ಈ ಬಗ್ಗೆ ಎಐಸಿಸಿ ನಾಯಕರು ಯಾರೂ ನಮ್ಮನ್ನು ಸಂಪರ್ಕಿಸಿ ಮಾಹಿತಿ ಕೇಳಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ಯಾಕೆ ಚಿಕ್ಕ ವಯಸ್ಸಿನ ಹುಡುಗನ ಕಡೆಗೆ ಆಕರ್ಷಿತರಾಗುತ್ತಾರೆ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments