ಇಂಥವರೆಲ್ಲಾ ಗೃಹಲಕ್ಷ್ಮಿ ತಗೋಬಾರದು, ತೆಗೆದುಕೊಂಡ್ರೆ ತಪ್ಪಲ್ವಾ: ಸಚಿವ ಎಂಬಿ ಪಾಟೀಲ್ ಶಾಕಿಂಗ್ ಹೇಳಿಕೆ

Krishnaveni K
ಬುಧವಾರ, 19 ಫೆಬ್ರವರಿ 2025 (11:55 IST)
ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಬಗ್ಗೆ ಸಚಿವ ಕೆಜೆ ಜಾರ್ಜ್ ಬಳಿಕ ಈಗ ಸಚಿವ ಎಂಬಿ ಪಾಟೀಲ್ ನೀಡಿರುವ ಹೇಳಿಕೆ ವೈರಲ್ ಆಗಿದೆ. ಗೃಹಲಕ್ಷ್ಮಿ ಯೋಜನೆ ತಗೋಬಾರದು, ತಗೊಂಡ್ರೆ ತಪ್ಪಲ್ವಾ ಎಂದಿದ್ದಾರೆ.

ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅದರಲ್ಲಿ ಮನೆ ಯಜಮಾನಿ ಖಾತೆಗೆ ಪ್ರತೀ ತಿಂಗಳು 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯೂ ಒಂದು.

ಈ ಯೋಜನೆಯಂತೆ ಸರ್ಕಾರ ಪ್ರತೀ ತಿಂಗಳು ಫಲಾನುಭವಿಗಳ ಖಾತೆಗೆ ಹಣ ಹಾಕಬೇಕು. ಆದರೆ ಕಳೆದ ಮೂರು ತಿಂಗಳಿನಿಂದ ಹಣ ಜಮೆ ಆಗಿರಲಿಲ್ಲ. ನಿನ್ನೆ ಈ ಬಗ್ಗೆ ಸಚಿವ ಕೆಜೆ ಜಾರ್ಜ್ ಪ್ರತೀ ತಿಂಗಳು ಹಾಕಕ್ಕೆ ಅದೇನು ಸಂಬಳವಾ ಎಂದು ಪ್ರಶ್ನಿಸಿ  ವಿವಾದಕ್ಕೀಡಾಗಿದ್ದರು.

ಇಂದು ಈ ವಿಚಾರವನ್ನು ಸಚಿವ ಎಂಬಿ ಪಾಟೀಲ್ ಗೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ಅವರು ‘ನೋಡ್ರೀ ಯಾರು ಬಡವರಿರುತ್ತಾರೆ ಅವರಿಗೆ ಫಲ ಸಿಗಬೇಕು. ಶ್ರೀಮಂತರು ಗೃಹಲಕ್ಷ್ಮಿ ಯೋಜನೆಯನ್ನು ತಗೊಳ್ಳಬಾರದು. ಈಗ ಎಂಬಿ ಪಾಟೀಲ್ ಆದ ನನ್ನ ಮನೆಯವರು ತಗೊಂಡ್ರೆ ತಪ್ಪಲ್ವಾ? ಶ್ರೀಮಂತರು ತಾವಾಗಿಯೇ ಈ ಯೋಜನೆಯ ಫಲಾನುಭವಿಗಳಾಗಿದ್ದರೆ ತಮ್ಮ ಹೆಸರು ಹಿಂಪಡೆಯಬೇಕು. ಇದರಿಂದ ಬಡವರಿಗೆ ಯೋಜನೆ ಸಿಗುವಂತಾಗುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments