Webdunia - Bharat's app for daily news and videos

Install App

ಬಿಪಿಎಲ್ ಕಾರ್ಡ್ ದಾರರಿಗೆ ಮಹತ್ವದ ಎಚ್ಚರಿಕೆ ಕೊಟ್ಟ ಸಚಿವ ಮುನಿಯಪ್ಪ

Krishnaveni K
ಬುಧವಾರ, 19 ಫೆಬ್ರವರಿ 2025 (14:45 IST)
ಬೆಂಗಳೂರು: ಅನ್ನಭಾಗ್ಯ ಯೋಜನೆ ಹಣ ವಿಳಂಬವಾಗುತ್ತಿರುವುದರ ಬಗ್ಗೆ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆಎಚ್ ಮುನಿಯಪ್ಪ ಬಿಪಿಎಲ್ ಕಾರ್ಡ್ ದಾರರಿಗೆ ಮಹತ್ವದ ಎಚ್ಚರಿಕೆ ಕೊಟ್ಟಿದ್ದಾರೆ.

ಈಗಾಗಲೇ ಪಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯುತ್ತಿದೆ. ಇದು ನಿಧಾನವಾಗಿ ನಡೆಯುತ್ತಿದೆ. ಸರಿಯಾಗಿ ಪರಿಶೀಲಿಸಿ ಕೆಲಸ ನಡೆಯಬೇಕು. ಅದಕ್ಕಾಗಿ ಸ್ವಲ್ಪ ಸಮಯ ಹಿಡಿಯುತ್ತಿದೆ ಎಂದಿದ್ದಾರೆ.

ಇನ್ನು, ಅರ್ಹತೆಯಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವ ಶ್ರೀಮಂತರಿಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಎಪಿಎಲ್ ಕಾರ್ಡ್ ನಲ್ಲಿರಬೇಕಾದವರು ಬಿಪಿಎಲ್ ಕಾರ್ಡ್  ಹೊಂದಿದ್ದರೆ ತಕ್ಷಣವೇ ಹಿಂದಿರುಗಿಸಿ ಎಂದು ಸಚಿವರು ಹೇಳಿದ್ದಾರೆ. ನಾವು ಸ್ವಲ್ಪ ಸಮಯ ಕೊಡುತ್ತೇವೆ. ಅದರೊಳಗೆ ಕೊಡದೇ ಇದ್ದರೆ ದಂಡ ವಿಧಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಸರ್ಕಾರದ ಯೋಜನೆಗಳು ಬಡವರಿಗೆ, ಅರ್ಹರಿಗೆ ತಲುಪುವಂತಾಗಬೇಕು. ಅದಕ್ಕೋಸ್ಕರ ಈ ಮನವಿ ಮಾಡುತ್ತಿದ್ದೇವೆ. ಈಗಾಗಲೇ ಪರಿಷ್ಕರಣೆ ಕಾರ್ಯಕ್ರಮ ಶುರು ಮಾಡಿದ್ದೆವು. ಈ ಸಂದರ್ಭದಲ್ಲಿ ಕೆಲವರು ಅಕಸ್ಮಾತ್ತಾಗಿ ಅರ್ಹತೆಯಿದ್ದರೂ ಬಿಪಿಎಲ್ ಕಾರ್ಡ್ ಪಟ್ಟಿಯಿಂದ ಹೊರಬಿದ್ದರು. ಆ ತಪ್ಪುಗಳನ್ನು ತಿದ್ದಿಕೊಳ್ಳಲು ಸಮಯ ಹಿಡಿಯಿತು. ಈಗ ಬಿಪಿಎಲ್ ಕಾರ್ಡ್ ಹೊಂದಿರುವ ಎಪಿಎಲ್ ಕಾರ್ಡ್ ದಾರರು ಯಾರಿದ್ದಾರೆ ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ನೀವಾಗಿಯೇ ಬಿಟ್ಟುಕೊಟ್ಟರೆ ಒಳ್ಳೆಯದು. ಇಲ್ಲದೇ ಹೋದರೆ ಪೆನಾಲ್ಟಿ ಹಾಕಲೇಬೇಕಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments