Select Your Language

Notifications

webdunia
webdunia
webdunia
webdunia

ಸಚಿವೆ ಉಮಾಶ್ರೀಯವರಿಗೆ ಕೆಲಸ ಮಾಡುವ ಆಸಕ್ತಿಯಿಲ್ಲ: ಕರಂದ್ಲಾಜೆ

ಸಚಿವೆ ಉಮಾಶ್ರೀಯವರಿಗೆ ಕೆಲಸ ಮಾಡುವ ಆಸಕ್ತಿಯಿಲ್ಲ: ಕರಂದ್ಲಾಜೆ
ಬೆಂಗಳೂರು , ಮಂಗಳವಾರ, 29 ಜುಲೈ 2014 (16:52 IST)
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀಯವರಿಗೆ ಕೆಲಸ ಮಾಡುವ ಆಸಕ್ತಿಯಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಅನೇಕ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದರೂ ಸಚಿವೆ ಉಮಾಶ್ರೀ ಅತ್ಯಾಚಾರದಿಂದ ನೊಂದ ಕುಟುಂಬಗಳಿಗೆ ಸಾಂತ್ವನ ಹೇಳಲು ಸಾಧ್ಯವಾಗಿಲ್ಲ ಎಂದು ಲೇವಡಿ ಮಾಡಿದ್ದಾರೆ.
 
ಅತ್ಯಾಚಾರದ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಗಂಭೀರತೆಯಿಲ್ಲ ಎಂದು ಆರೋಪಿಸಿದರು.
 
ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರದಿಂದ ಮಕ್ಕಳಿಗೆ ಮಹಿಳೆಯರಿಗೆ ರಕ್ಷಣೆ ದೊರೆಯುವ ಭರವಸೆಯಿಲ್ಲ. ಕೂಡಲೇ ಕೇಂದ್ರ ಸರಕಾರ ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.
 
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ನಾನು ಮಹಿಳೆಯರ ಸುರಕ್ಷತೆ ಬಗ್ಗೆ ತುಂಬಾ ಕಾಳಜಿ ವಹಿಸಿದ್ದೆ. ಸಂಸದೆಯಾದಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಸಿಎಂಗೆ ಪತ್ರ ಬರೆದಿದ್ದೆ ಎಂದು ಮಾಜಿ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Share this Story:

Follow Webdunia kannada