Webdunia - Bharat's app for daily news and videos

Install App

ಹೊಸ ಮಾರ್ಗಸೂಚಿಯೊಂದಿಗೆ ವಿದ್ಯಾಗಮ ಆರಂಭ-ಶಿಕ್ಷಣ ಸಚಿವ

Webdunia
ಬುಧವಾರ, 16 ಡಿಸೆಂಬರ್ 2020 (12:04 IST)
ಬೆಂಗಳೂರು : ಹೊಸ ಮಾರ್ಗಸೂಚಿಯೊಂದಿಗೆ  ವಿದ್ಯಾಗಮ ಆರಂಭ ಮಾಡಲಾಗುವುದು ಎಂದು ಶಿಕ್ಷಣ್ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳವರು ಮಾತ್ರ ಆನ್ ಲೈನ್ ಶಿಕ್ಷಣ ಪಡೆಯುತ್ತಿದ್ದಾರೆ. ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ವಿದ್ಯಾಗಮ ಆರಂಭ ಮಾಡಲಾಗಿತ್ತು. ಶಿಕ್ಷಕರಿಗೆ ಕೊರೊನಾ ಬಂದ ಹಿನ್ನಲೆಯಲ್ಲಿ ವಿದ್ಯಾಗಮ ನಿಲ್ಲಿಸಲಾಯಿತು. ದೇವಾಲಯಗಳ ಆವರಣದಲ್ಲಿ ಪಾಠ ಮಾಡಲಾಗುತ್ತಿತ್ತು. ಕೆಲ ಹೆಣ್ಣುಮಕ್ಕಳು ಕಳಿಸಲ್ಲವೆಂದು ಪೋಷಕರು ಹೇಳ್ತಿದ್ರು. ಕೆಲ ಸಂದರ್ಭದಲ್ಲಿ ಹೆಣ್ಣುಮಕ್ಕಳು ದೇಗುಲಕ್ಕೆ ಬರುತ್ತಿರಲಿಲ್ಲ. ಹೀಗಾಗಿ ಹೊಸ ಮಾರ್ಗಸೂಚಿಯೊಂದಿಗೆ  ಆರಂಭಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಅಲ್ಲದೇ ವಿದ್ಯಾಗಮ ಏಕೆ ಆರಂಭಿಸಬಾರದೆಂದು ಹೈಕೋರ್ಟ್ ಕೇಳಿತು. ತಜ್ಞರು ನೀಡಿದ ಸಲಹೆಗಳನ್ನು ಕೋರ್ಟ್ ಗೆ ಸಲ್ಲಿಸಿದ್ದೇವೆ. ಅದರಂತೆ ಈಗ ವಿದ್ಯಾಗಮ ಪ್ರಾರಂಭ ಮಾಡುತ್ತೇವೆ. ಶಾಲೆಯ ಹೊರಗೆ ಶಿಕ್ಷಣ ನೀಡುತ್ತೇವೆ. ಮಕ್ಕಳಿಗೆ ಹತ್ತಿರುವಿರುವ ಶಾಲೆಗಳಿಗೆ ಹೋಗಬಹುದಾಗಿದೆ. ಪೋಷಕರ, ಶಿಕ್ಷಕರ ಅಪೇಕ್ಷೆ ಮೇರೆಗೆ ವಿದ್ಯಾಗಮ ಆರಂಭ ಮಾಡಲಾಗಿದೆ, ಇದಕ್ಕೆ ಯಾವುದೇ ವಿರೋಧವಿಲ್ಲ ಎಂದು ಅವರು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments