Webdunia - Bharat's app for daily news and videos

Install App

ಮಾನವೀಯತೆ ಮೆರೆದ ಸಚಿವ!

Webdunia
ಬುಧವಾರ, 20 ಫೆಬ್ರವರಿ 2019 (16:03 IST)
ತುಮಕೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಅವರ ಕಾರು ಅಪಘಾತವಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದರು. ಶಾಸಕರ ಈ ಕಾರ್ಯಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗ್ತಿದೆ. ಆದರೆ ಇತ್ತ ಸಚಿವರೊಬ್ಬರ ಮಾನವೀಯತೆ ಗಮನ ಸೆಳೆದಿದೆ.  

ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್, ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಸಚಿವ ರಾಜಶೇಖರ್ ಪಾಟೀಲ್ ಬೀದರ್ ನ ಹಳ್ಳಿಖೇಡ ಬಿ ಯಿಂದ ಹುಮ್ನಾಬಾದ್ ಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ವೊಂದಕ್ಕೆ ವಾಹನ ಗುದ್ದಿ ಹೋಗಿತ್ತು. ಇದರಿಂದ ಬೈಕ್ ಸವಾರಿಬ್ಬರು ರಸ್ತೆಯಲ್ಲಿ ಬಿದ್ದು ಒದ್ದಾಡುತಿದ್ದರು.

ಇದನ್ನು ಗಮನಿಸಿದ ಸಚಿವ ರಾಜಶೇಖರ್ ಪಾಟೀಲ್, ಗಾಯಾಳುಗಳನ್ನು ಆಟೋ ತರಿಸಿ ಅದರ ಮೂಲಕ ಹಳ್ಳಿಖೇಡ ಬಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಅಲ್ಲಿ ಒಬ್ಬಾತನಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ, ಮತ್ತೊಬ್ಬ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಸಚಿವರ ಈ ಮಾನವೀಯತೆಯನ್ನ ಕಂಡು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments