ಕಾರ್ಮಿಕ ಸಚಿವ ಪರಮೇಶ್ವರ ನಾಯ್ಕ ಬೆಂಬಲಿಗರು ಬಳ್ಳಾರಿಯಲ್ಲಿ ಅಮ್ ಅದ್ಮಿ ಪಕ್ಷದ ಕಾರ್ಯಕರ್ತ ಮಹೇಂದ್ರ ಅವರ ತಾಯಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಕಾರ್ಮಿಕ ಸಚಿವ ಪರಮೇಶ್ವರ ನಾಯ್ಕ ಅವರ ಪುತ್ರ ಭರತ್ ಅಕ್ರಮ ಮರಳು ದಂಧೆಯಲ್ಲಿ ಭಾಗಿಯಾಗಿರುವ ಕುರಿತು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಚಿವರ ಬೆಂಬಲಿಗರು ಮಹೇಂದ್ರ ಅವರ ತಾಯಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ನಿಮ್ಮ ಮಗ ಸಚಿವರ ವಿರುದ್ಧ ಮಾಧ್ಯಮಕ್ಕೆ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಆತನನ್ನು ಕೊಲೆ ಮಾಡಿಸುತ್ತೇವೆ. ಹಾಗೂ ಮಹೇಂದ್ರ ಅವರ ತಾಯಿ ಅವರಿಗೆ ನಿಮ್ಮ ಮೇಲೆ ಅತ್ಯಾಚಾರ ನಡೆಸುತ್ತೇವೆ ಎಂದು ಬೆದರಿಗೆ ನೀಡಿ ಹಲ್ಲೆ ಮಾಡಿದ್ದಾರೆಂದು ಅಮ್ ಅದ್ಮಿ ಪಕ್ಷದ ಕಾರ್ಯಕರ್ತ ಮಹೇಂದ್ರ ಹೂವಿನ ಹಡಗಲಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಲ್ಲೆಯಿಂದ ಅಸ್ವಸ್ಥರಾಗಿರುವ ಮಹೇಶ್ವರಮ್ಮ ಹೂವಿನ ಹಡಗಲಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ