Select Your Language

Notifications

webdunia
webdunia
webdunia
Sunday, 13 April 2025
webdunia

ಹೆಚ್.ಕೆ.ಪಾಟೀಲ್ ಪತ್ರ ವಯಕ್ತಿಕ ಎಂದ ಸಚಿವ ಪಾಟೀಲ್

ಉತ್ತರ ಕರ್ನಾಟಕ
ಬೀದರ್ , ಭಾನುವಾರ, 22 ಜುಲೈ 2018 (20:48 IST)
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್. ಕೆ. ಪಾಟೀಲ್ ಪತ್ರ ಬರೆದಿರುವುದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಗಣಿ ಮತ್ತು ಭೂ ವಿಜ್ಞಾನ, ಮಜರಾಯಿ ಸಚಿವ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.

ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯ ಒಡಕಿಲ್ಲ, ನಾವೆಲ್ಲರು ಒಂದಾಗಿದ್ದೇವೆ. ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ. ನಾವು ಎಲ್ಲರೂ ಸೇರಿ ಅಖಂಡ ಕರ್ನಾಟಕಕ್ಕೆ ಶ್ರಮಿಸುತ್ತೇವೆ ಎಂದಿದ್ದಾರೆ.

ನಾನು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದಿರುವ ಅವರು, ಸಮನ್ವಯ ಸಮಿತಿ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಬದ್ದನಾಗಿದ್ದೇನೆ ಎಂದೂ ಬೀದರ್ ನಲ್ಲಿ ಗಣಿ ಮತ್ತು ಭೂ ವಿಜ್ಞಾನ, ಮಜರಾಯಿ ಸಚಿವ ರಾಜಶೇಖರ್ ಪಾಟೀಲ್ ಹೇಳಿಕೆ ನೀಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಮತದಾರರ ನಿರೀಕ್ಷೆ ಪೂರೈಸುವ ಶಕ್ತಿ ನೀಡಲು ಭಗವಂತನಲ್ಲಿ ಪ್ರಾರ್ಥಿಸಿದ ಶಾಸಕ