ಅಕ್ರಮ ಗೋವುಗಳ ಸಾಗಣೆ ನಡೆಯುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ: ಸಚಿವ ಪ್ರಭು ಚವ್ಹಾಣ್

Webdunia
ಗುರುವಾರ, 30 ಸೆಪ್ಟಂಬರ್ 2021 (20:56 IST)
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸಮರ್ಪಕವಾಗಿ ಅನುಷ್ಟಾನವಾಗುವಲ್ಲಿ ಇಲಾಖೆಯ ಅಧಿಕಾರಿಗಳು ಹೆಚ್ಚು ಆಸಕ್ತಿ ತೋರಬೇಕು, ಅಕ್ರಮ ಗೋವುಗಳ ಸಾಗಣೆ ನಡೆಯುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. 
 
ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಚವ್ಹಾಣ್  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಗೋಹತ್ಯೆ ನಿಷೇಧದ ನಡುವೆ ಅಕ್ರಮ ಗೋವುಗಳ ಸಾಗಣೆ ನಡೆಯುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ. ಗೋವು ಕೇವಲ ನಮ್ಮ ಸಂಸ್ಕೃತಿಯ ಭಾಗವಲ್ಲ ರೈತನ ಜೀವನಾಧಾರ, ಪರಿಸರ ವ್ಯವಸ್ಥೆಯಲ್ಲಿ, ಮಾನವನ ಜೀವನದಲ್ಲಿ ಗೋವಿನ ಪಾತ್ರ ಬಹುದೊಡ್ಡದಿದೆ, ಗೋ ಸಂರಕ್ಷಣೆ ಜವಾಬ್ದಾರಿಯಿಂದ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
 
ಗೋವುಗಳ ಆರೋಗ್ಯಕ್ಕೆ ಒತ್ತು ನೀಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಧಿಕಾರಿಗಳು ಗೋವುಗಳ ಆರೋಗ್ಯದ ಬಗ್ಗೆ ಸೂಕ್ಷ್ಮವಾಗಿ ಗಮನಹರಿಸಿ. ಕಾಲುಬಾಯಿ ರೋಗದಿಂದ ಕರ್ನಾಟಕವನ್ನು ಮುಕ್ತಗೊಳಿಸಲು ಶ್ರಮವಹಿಸಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.  
 
ಗೋವುಗಳಲ್ಲಿ ಇತ್ತೀಚೆಗೆ ವ್ಯಾಪಕವಾಗಿ ರೋಗಗಳು ಕಂಡುಬರುತ್ತಿವೆ. ಗೋವು ರೈತರ ಆದಾಯದ ಮೂಲ ಆಗಿರುವುದರಿಂದ ಅವುಗಳ ಆರೋಗ್ಯದ ರಕ್ಷಣೆಯ ಸಂಪೂರ್ಣ ಜವಾಬ್ದಾರಿ ನಮ್ಮ ಮೇಲಿದೆ. ಚಿಕಿತ್ಸೆ ಕುರಿತಾಗಿ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ಬರುತ್ತಿರುವ ಕರೆಗಳನ್ನು ಗಂಭೀರವಾಗಿ ಪರಿಗಣಿಸಿ ಚಿಕಿತ್ಸೆ ನೀಡಲು ಮುಂದಾಗಿ. ರೋಗ ಕಂಡುಬಂದ ಎಲ್ಲಾ ಪ್ರದೇಶದಲ್ಲಿ ಆದ್ಯತೆ ಮೇಲೆ ರಿಂಗ್ ವ್ಯಾಕ್ಸಿನ್ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಜಿಲ್ಲೆಗೊಂದು ಗೋಶಾಲೆ: 
 
ರಾಜ್ಯದಲ್ಲಿ ಗೋಹತ್ಯೆ ನೀಷೇಧ ಜಾರಿಯಾದ ನಂತರ ಗೋವುಗಳ ಸಂರಕ್ಷಣೆಗೆ ಇಲಾಖೆ ಬದ್ಧವಾಗಿದ್ದು ಜಿಲ್ಲೆಗೊಂದು ಗೋಶಾಲೆ ತೆರೆಯಲು ಇಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಗೋಮಾಳವನ್ನು ಇಲಾಖೆಯ ಸುಪರ್ದಿಗೆ ಪಡೆಯುವ ಕಾರ್ಯ ಜಿಲ್ಲೆಗಳಲ್ಲಿ ನಡೆದಿದ್ದು ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ  ಚರ್ಚೆ ಮಾಡಿ ಗೋಶಾಲೆಗಳ ಉದ್ಘಾಟನೆ ಮಾಡಲಾಗುವುದು. ಸದ್ಯ ಕೆಲವು ಜಿಲ್ಲೆಗಳಲ್ಲಿ ಗೋಶಾಲೆಗಳ ಜಮೀನಿನ ಹಸ್ತಾಂತರ ಬಾಕಿ ಇದ್ದು ಇಲಾಖೆಯ ಕಾರ್ಯದರ್ಶೀ,ಆಯುಕ್ತರು ಹಾಗೂ ಉಪನಿರ್ದೇಶಕರ ಹೆಚ್ಚು ವೇಗದಲ್ಲಿ ಗೋಶಾಲೆ ತೆರೆಯುವ ಕಾರ್ಯ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು 
 
ಇಲಾಖೆಯ ಯೋಜನೆಗಳ ಅರಿವು ಅಧಿಕಾರಿಗಳಿಗೆ ಇರಲಿ: 
 
ಪಶುಸಂಗೋಪನೆ ಇಲಾಖೆಯ ಎಲ್ಲ ಯೋಜನೆಗಳು ಅಧಿಕಾರಿಗಳು ಜನಸಾಮಾನ್ಯರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಇದಕ್ಕೂ ಮೊದಲು ಅಧಿಕಾರಿಗಳಿಗೆ ಯೋಜನೆಗಳ ಸಮರ್ಪಕವಾದ ಮಾಹಿತಿ ಇರಬೇಕು, ಇಲ್ಲವಾದಲ್ಲಿ ಯೋಜನೆ ಅನುಷ್ಠಾನದಲ್ಲಿ ಹಿನ್ನಡೆಯಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 
 
ಅನುಗ್ರಹ ಯೋಜನೆಯ ಪರಿಹಾರ ವಿಳಂಬಕ್ಕೆ ಅಸಮಾಧಾನ: 
 
ಅನುಗ್ರಹ ಯೋಜನೆಯ ಹಣ ಬಿಡುಗಡೆಯಾದರೂ ಅಧಿಕಾರಿಗಳ ನಿರ್ಲಕ್ಷದಿಂದ ಫಲಾನುಭವಿಗಳಿಗೆ ಪರಿಹಾರ ದೊರಕದಿರುವುದಕ್ಕೆ ಎಲ್ಲಾ  ಜಿಲ್ಲೆಯ ಜನಪ್ರತಿನಿಧಿಗಳ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಸಚಿವ ಚವ್ಹಾಣ್ ಸಭೆಯಲ್ಲಿ ಅಧಿಕಾರಿಗಳ ಮೇಲೆ ಕೆಂಡಾಮಂಡಲರಾದರು. 
 
ಅನುಗ್ರಹ ಯೋಜನೆಗೆ ಈಗಾಗಲೇ ಒಟ್ಟು 39 ಕೋಟಿ ರೂ ಬಿಡುಗಡೆ ಆಗಿದ್ದು,ರಾಜ್ಯದ ಎಲ್ಲ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ತಲುಪುವಂತೆ ನೋಡಿಕೊಳ್ಳಿ ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದರು.
 
ಸದ್ಯ ರೂ.25 ಕೋಟಿ ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೀಡಲಾಗಿದ್ದು ಬಾಕಿ ಉಳಿದ ರೂ.೧೫ ಕೋಟಿ ಪರಿಹಾರವನ್ನು ಶೀಘ್ರದಲ್ಲಿ ನೀಡಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
rabis

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments