Select Your Language

Notifications

webdunia
webdunia
webdunia
webdunia

RSS ವಿರುದ್ಧ ಕ್ರಮದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

Minister Priyank Kharge
ಬೆಂಗಳೂರು: ಸರ್ಕಾರ ಕಾನೂನು ಚೌಕಟ್ಟಿನೊಳಗೆ ಆರ್‌ಸ್ಸೆಸ್ಸೆ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಹೇಳಿದ್ದಾರೆ.  

ಮುಂದಿನ ಕ್ರಮವನ್ನು ನಿರ್ಧರಿಸುವ ಮೊದಲು ಸಂಘಟನೆ ಮತ್ತು ಅದರ ಇತಿಹಾಸವನ್ನು ಅಧ್ಯಯನ ಮಾಡುತ್ತಿರುವುದಾಗಿ ಖರ್ಗೆ ತಿಳಿಸಿದ್ದಾರೆ.

ಇಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನ್ನು "ಕಾನೂನು ಚೌಕಟ್ಟಿನೊಳಗೆ" ತರುವುದಾಗಿ ಪ್ರತಿಪಾದಿಸಿದರು. 

ಸಂಘಟನೆಯ ನೋಂದಣಿ ಸೇರಿದಂತೆ ಹಲವಾರು ವಿಷಯಗಳ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರಕ್ಕೆ ಉತ್ತರ ಬಂದಿದೆಯೇ ಎಂದು ವರದಿಗಾರರು ಪ್ರಿಯಾಂಕ್ ಖರ್ಗೆ ಅವರನ್ನು ಕೇಳಿದಾಗ, ಪ್ರತಿಕ್ರಿಯೆ ನೀಡಿದ ಅವರು, ಪ್ರತಿಕ್ರಿಯೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಈ ವಿಷಯವನ್ನು ಪ್ರಸ್ತಾಪಿಸಿ ಸುಮಾರು ಒಂದೂವರೆ ತಿಂಗಳುಗಳಾಗಿವೆ ಮತ್ತು ಮುಂದುವರಿಯುವ ಮೊದಲು ಆರ್‌ಎಸ್‌ಎಸ್ ಮತ್ತು ಅದರ ಇತಿಹಾಸವನ್ನು ಅಧ್ಯಯನ ಮಾಡಲು ಸರ್ಕಾರಕ್ಕೆ ಸಮಯ ಬೇಕಾಗುತ್ತದೆ ಎಂದು ಹೇಳಿದರು.

ನಾವು ಅವರ 100 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿ ಅರ್ಥಮಾಡಿಕೊಳ್ಳಬೇಕು. ಅವರಿಗೇ ಅವರದೇ ಆದ ಇತಿಹಾಸದ ಅರಿವಿಲ್ಲ ಎಂದು ಸಚಿವರು ಲೇವಡಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಡದಿ ಬೃಹತ್ ಪಾದಯಾತ್ರೆಯಲ್ಲಿ ಬಿಜೆಪಿ ಪಾಲ್ಗೊಳ್ಳುವಿಕೆ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ