Select Your Language

Notifications

webdunia
webdunia
webdunia
webdunia

ಗಂಗಾ ನದಿ ಕಲುಷಿತವಾಗಿದೆ ಎಂದು ಕೇಂದ್ರದ ಸಂಸ್ಥೆಗಳೇ ಹೇಳುತ್ತಿವೆ: ಪ್ರಿಯಾಂಕ್ ಖರ್ಗೆ

Priyank Kharge

Krishnaveni K

ಬೆಂಗಳೂರು , ಬುಧವಾರ, 26 ಫೆಬ್ರವರಿ 2025 (11:42 IST)
ಬೆಂಗಳೂರು: ಗಂಗಾ ನದಿ ಕಲುಷಿತವಾಗಿದೆ ಎಂದು ಕೇಂದ್ರದ ಸಂಸ್ಥೆಗಳೇ ವರದಿ ಕೊಟ್ಟಿದೆ. ಆದರೂ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅವರದೇ ಕೇಂದ್ರ ಸಂಸ್ಥೆಗಳೇ ಗಂಗಾ ನದಿ ನೀರು ಸ್ನಾನಕ್ಕೂ ಯೋಗ್ಯವಲ್ಲ ಎಂದು ಹೇಳಿರುವಾಗ ಕೆಲವು ಖಾಸಗಿ ಸಂಸ್ಥೆಗಳು ಲಾಭ ಮಾಡಿಕೊಳ್ಳಲು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕುಂಭಮೇಳಕ್ಕೆ 54 ಕೋಟಿ ಜನ ಬಂದು ಸ್ನಾನ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸಂತೋಷ, ಆದರೆ ಅದರ ಪರಿಣಾಮ ಏನು ಆಗಿದೆ ಎನ್ನುವುದು ತಿಳಿಯಬೇಕು ಅಲ್ವಾ? ಎಷ್ಟೋ ಜನ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕಲುಷಿತ ನೀರಿನಿಂದ ಸಮಸ್ಯೆಯಾಗುತ್ತಿದೆ ಎಂದರೂ ಜನರ ದಿಕ್ಕು ತಪ್ಪಿಸಿ ರಾಜಕೀಯ ಬೇಳೆ ಬೇಯಿಸಲು ವ್ಯಾಪಾರ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯಾವುದೇ ನದಿಗಳು ಕಲುಷಿತವಾದರೆ ಅದರ ನಷ್ಟ ಯಾರಿಗೆ ಹೇಳಿ? ಹೀಗಾಗಿ ಪ್ರಯಾಗ್ ರಾಜ್ ನ ಕುಂಭಮೇಳ ಇರಬಹುದು, ನಮ್ಮ ನದಿಗಳೇ ಇರಬಹುದು. ಅದನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ ಎಂದಷ್ಟೇ ನನ್ನ ಉದ್ದೇಶ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ ಸಿಎಸ್ ಟಿ ಹಣ ಮೋದಿ ಕಿತ್ತುಕೊಂಡಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ: ರಾಜ್ಯದಲ್ಲಿ ಆಗ್ತಿರೋದು ಏನು ಎಂದ ನೆಟ್ಟಿಗರು