Webdunia - Bharat's app for daily news and videos

Install App

ಗಂಗಾ ನದಿ ಕಲುಷಿತವಾಗಿದೆ ಎಂದು ಕೇಂದ್ರದ ಸಂಸ್ಥೆಗಳೇ ಹೇಳುತ್ತಿವೆ: ಪ್ರಿಯಾಂಕ್ ಖರ್ಗೆ

Krishnaveni K
ಬುಧವಾರ, 26 ಫೆಬ್ರವರಿ 2025 (11:42 IST)
ಬೆಂಗಳೂರು: ಗಂಗಾ ನದಿ ಕಲುಷಿತವಾಗಿದೆ ಎಂದು ಕೇಂದ್ರದ ಸಂಸ್ಥೆಗಳೇ ವರದಿ ಕೊಟ್ಟಿದೆ. ಆದರೂ ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅವರದೇ ಕೇಂದ್ರ ಸಂಸ್ಥೆಗಳೇ ಗಂಗಾ ನದಿ ನೀರು ಸ್ನಾನಕ್ಕೂ ಯೋಗ್ಯವಲ್ಲ ಎಂದು ಹೇಳಿರುವಾಗ ಕೆಲವು ಖಾಸಗಿ ಸಂಸ್ಥೆಗಳು ಲಾಭ ಮಾಡಿಕೊಳ್ಳಲು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕುಂಭಮೇಳಕ್ಕೆ 54 ಕೋಟಿ ಜನ ಬಂದು ಸ್ನಾನ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ. ಸಂತೋಷ, ಆದರೆ ಅದರ ಪರಿಣಾಮ ಏನು ಆಗಿದೆ ಎನ್ನುವುದು ತಿಳಿಯಬೇಕು ಅಲ್ವಾ? ಎಷ್ಟೋ ಜನ ಕುಂಭಮೇಳಕ್ಕೆ ಹೋಗಿ ಬಂದವರಿಗೆ ಕಲುಷಿತ ನೀರಿನಿಂದ ಸಮಸ್ಯೆಯಾಗುತ್ತಿದೆ ಎಂದರೂ ಜನರ ದಿಕ್ಕು ತಪ್ಪಿಸಿ ರಾಜಕೀಯ ಬೇಳೆ ಬೇಯಿಸಲು ವ್ಯಾಪಾರ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಯಾವುದೇ ನದಿಗಳು ಕಲುಷಿತವಾದರೆ ಅದರ ನಷ್ಟ ಯಾರಿಗೆ ಹೇಳಿ? ಹೀಗಾಗಿ ಪ್ರಯಾಗ್ ರಾಜ್ ನ ಕುಂಭಮೇಳ ಇರಬಹುದು, ನಮ್ಮ ನದಿಗಳೇ ಇರಬಹುದು. ಅದನ್ನು ಕಾಪಾಡಿಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ ಎಂದಷ್ಟೇ ನನ್ನ ಉದ್ದೇಶ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments