Select Your Language

Notifications

webdunia
webdunia
webdunia
webdunia

ಬಿಜೆಪಿ ಸಂಸದರಿಗೆ ದಮ್ ಇದ್ರೆ ಮೆಟ್ರೊ ದರ ಕಡಿಮೆ ಮಾಡಲಿ, ನಾವು ಜವಾಬ್ಧಾರಿ ಅಲ್ಲ: ಪ್ರಿಯಾಂಕ್ ಖರ್ಗೆ

Priyank Kharge

Krishnaveni K

ಬೆಂಗಳೂರು , ಸೋಮವಾರ, 10 ಫೆಬ್ರವರಿ 2025 (13:21 IST)
ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ದರ ಏರಿಕೆಗೆ ನಾವು ಜವಾಬ್ಧಾರಿ ಅಲ್ಲ, ಧಮ್ ಇದ್ರೆ ಬಿಜೆಪಿ ಸಂಸದರು ಕಡಿಮೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

ನಮ್ಮ ಮೆಟ್ರೊ ದರ ನಿನ್ನೆಯಿಂದ ಏಕಾಏಕಿ 40%-50% ನಿಂದ ಹೆಚ್ಚು ಮಾಡಿದ್ದಾರೆ. ಇದರ ಬಗ್ಗೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಇಂದು ಸಚಿವ ಪ್ರಿಯಾಂಕ್ ಖರ್ಗೆ ಮಾಧ್ಯಮಗಳ ಮುಂದೆ ವ್ಯಂಗ್ಯ ಮಾಡಿದ್ದಾರೆ.

ಮೆಟ್ರೊ ದರ ಏರಿಕೆ ಮಾಡಿರುವುದಕ್ಕೆ ನಮ್ಮ ಸರ್ಕಾರ ಜವಾಬ್ಧಾರಿ ಅಲ್ಲ. ಮೆಟ್ರೊ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಈ ಹಿಂದೆ ಮೆಟ್ರೊ ದರ ಏರಿಕೆ ಮಾಡಲ್ಲ ಎಂದಾಗ ಇದೇ ಬಿಜೆಪಿ ಸಂಸದರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಅಂದರೆ ಈಗ ದರ ಏರಿಕೆ ಮಾಡಿದಾಗ ನಾವು ಜವಾಬ್ಧಾರಿಯಾ? ಈಗಲೂ ಕೇಂದ್ರ ಸರ್ಕಾರವನ್ನು ಹೋಗಿ ಕೇಳಲಿ.

ನಾವು ಇಲ್ಲಿ ಬಸ್ ದರ ಹೆಚ್ಚಳ ಮಾಡಿದಾಗ ಇದೇ ಬಿಜೆಪಿ ನಾಯಕರು ಗುಲಾಬಿ ಹೂ ಹಿಡಿದುಕೊಂಡು ಬಸ್ ಸ್ಟ್ಯಾಂಡ್ ಗೆ ಹೋಗಿ ಜನರ ಬಳಿ ಕ್ಷಮೆ ಕೇಳಿದರು. ಈಗಲೂ ಬಿಜೆಪಿ ನಾಯಕರು ಮೆಟ್ರೊ ನಿಲ್ದಾಣಕ್ಕೆ ಹೋಗಿ ಮೋದಿ ಪರವಾಗಿ ಕ್ಷಮೆ ಕೇಳಲಿ. ಬೇಕಿದ್ದರೆ ಗುಲಾಬಿ ಹೂ ನಾವೇ ಖರೀದಿಸಿ ಕೊಡುತ್ತೇವೆ ಎಂದು ಸಚಿವರು ಟಾಂಗ್ ಕೊಟ್ಟಿದ್ದಾರೆ.

ಇಲ್ಲಿನ ಬಿಜೆಪಿ ಸಂಸದರಿಗೆ ದಮ್ ಇದ್ದರೆ ಮೆಟ್ರೊ ದರ ಕಡಿಮೆ ಮಾಡಲಿ. ಅದು ಬಿಟ್ಟು ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಗೂಬೆ ಕೂರಿಸೋದು, ಕಡಿಮೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸೋದು ಅಲ್ಲ ಎಂದು ಕಿಡಿ ಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ ಹವಾಮಾನ: ಬೆಂಗಳೂರಿಗರಿಗೆ ಬೇಸಿಗೆ ಹವಾಮಾನದ ಬಗ್ಗೆ ನೀಡಿದ ಎಚ್ಚರಿಕೆ ಗಮನಿಸಿದರೆ ಶಾಕ್ ಆಗ್ತೀರಿ