Webdunia - Bharat's app for daily news and videos

Install App

ಶಕ್ತಿ ಯೋಜನೆ ಮುನ್ನಡೆಸಲು ಕಷ್ಟವಾಗ್ತಿದೆ ಎಂದು ಒಪ್ಪಿಕೊಂಡ ಸಚಿವ ರಾಮಲಿಂಗಾ ರೆಡ್ಡಿ

Krishnaveni K
ಶನಿವಾರ, 2 ನವೆಂಬರ್ 2024 (14:30 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಅನಗತ್ಯ ಗೊಂದಲ ಉಂಟು ಮಾಡಬೇಡಿ ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆಯ ಹೊರತಾಗಿಯೂ ಈಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಶಕ್ತಿ ಯೋಜನೆ ನಡೆಸುವುದು ಕಷ್ಟವಾಗ್ತಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಬಸ್ ಪ್ರಯಾಣ ಮಾಡಲು ಅವಕಾಶ ನೀಡುವ ಶಕ್ತಿ ಯೋಜನೆ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯ ಅನ್ವಯ ಕರ್ನಾಟಕದ ವಿಳಾಸವಿರುವ ಆಧಾರ್ ಕಾರ್ಡ್ ಹೊಂದಿರುವ ಮಹಿಳೆಯರೆಲ್ಲರಿಗೂ ಉಚಿತವಾಗಿ ಬಿಎಂಟಿಸಿ ಮತ್ತು ಕೆಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಲು ಅವಕಾಶವಿದೆ.

ಮೊನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿ ಯೋಜನೆಯನ್ನು ಮುಂದುವರಿಸುವ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ಮಾಧ್ಯಮಗಳ ಮುಂದೆಯೇ ಡಿಕೆಶಿಗೆ ಕ್ಲಾಸ್ ತೆಗೆದುಕೊಂಡಿದ್ದರು.

ಈ ಘಟನೆ ಮಾಸುವ ಮುನ್ನವೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಶಕ್ತಿ ಯೋಜನೆ ನಡೆಸಲು ಕಷ್ಟವಾಗ್ತಿದೆ ಎಂದಿದ್ದಾರೆ. ಶಕ್ತಿ ಯೋಜನೆ ಮುನ್ನಡೆಸಲು ಸ್ವಲ್ಪ ಕಷ್ಟವಾಗ್ತಿದೆ. ಆದರೂ ನಾವು ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದಿದ್ದಾರೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್ ಕಾರ್ಡ್ ದಾರರು ಮಾತ್ರ ಫಲಾನುಭವಿಗಳು. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲರಿಗೂ ಉಚಿತ ಕೊಡಬೇಕಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments