Select Your Language

Notifications

webdunia
webdunia
webdunia
webdunia

ಸಚಿವ ಡಿ.ಕೆ.ಶಿವಕುಮಾರಗೆ ಟಾಂಗ್ ನೀಡಿದ ಸಚಿವ ರಮೇಶ ಜಾರಕಿಹೊಳಿ

ಸಚಿವ ಡಿ.ಕೆ.ಶಿವಕುಮಾರಗೆ ಟಾಂಗ್ ನೀಡಿದ ಸಚಿವ ರಮೇಶ ಜಾರಕಿಹೊಳಿ
, ಮಂಗಳವಾರ, 16 ಅಕ್ಟೋಬರ್ 2018 (19:20 IST)
ಕಾಂಗ್ರೆಸ್  ಮುಖಂಡರಲ್ಲಿ ಮುಸುಕಿನ ಗುದ್ದಾಟ ಜೋರಾಗಿದೆ. ಸಚಿವ ಡಿ.ಕೆ.ಶಿವಕುಮಾರ ವಿರುದ್ಧ ಸಚಿವ ರಮೇಶ ಜಾರಕಿಹೊಳಿ ಭರ್ಜರಿ ಟಾಂಗ್ ನೀಡಿದ್ದಾರೆ.

ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಪರ ಪ್ರಚಾರ ಮಾಡುತ್ತೇನೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ ಅವರೊಂದಿಗೆ ಪ್ರಚಾರಕ್ಕೆ ಹೋಗುವುದಿಲ್ಲ. ಹೀಗಂತ ಸಚಿವ ರಮೇಶ ಜಾರಕಿಹೊಳಿ ಖಡಕ್ ಆಗಿ ಹೇಳಿದ್ದಾರೆ.

ಸಚಿವ ರಮೇಶ ಜಾರಕಿಹೊಳಿ ಅವರ ಈ ಹೇಳಿಕೆಯಿಂದ ಕಾಂಗ್ರೆಸ್ ಮುಖಂಡರಲ್ಲಿ ಈಗಲೂ ಅಸಮಧಾನ ಇದೆ ಎನ್ನೋದು ಬಹಿರಂಗವಾಗಿದೆ.

ಪ್ರಚಾರಕ್ಕೆಂದು ಪೋಸ್ ನೀಡಿದವರೆಲ್ಲಾ ನಾಯಕರಾಗುವುದಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ