Webdunia - Bharat's app for daily news and videos

Install App

ವರ್ತೂರ್ ಪ್ರಕಾಶ್‌ಗೆ ಸಚಿವ ರಮೇಶ್ ಕುಮಾರ್ ತರಾಟೆ

Webdunia
ಶನಿವಾರ, 1 ಜುಲೈ 2017 (16:54 IST)
ರಾಜ್ಯದಲ್ಲಿನ ಸರಕಾರಿ ಆಸ್ಪತ್ರೆಯ ಸ್ಥಿತಿಯ ಬಗ್ಗೆ ನಿನಗೇನು ಗೊತ್ತು? ದಿನದ 24 ಗಂಟೆಗಳ ಕಾಲ ಸೇವೆ ಲಭ್ಯವಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಶಾಸಕ ವರ್ತೂರ್ ಪ್ರಕಾಶ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
 
ಕೋಲಾರ ಪತ್ರಿಕೆ ದಿನಾಚರಣೆ ವೇಳೆ ಶಾಸಕ ವರ್ತೂರ್ ಪ್ರಕಾಶ್ ಭಾಷಣ ಮಾಡಿ, ಡೆಂಘಿ ಜ್ವರ ಬಂದರೆ ರೋಗಿಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಬೇಡಿ, ಇಲ್ಲದಿದ್ರೆ ಮೂರು ದಿನದಲ್ಲಿ ಡೆಡ್‌ಬಾಡಿ ತೆಗೆದುಕೊಂಡು ಹೋಗಬೇಕಾಗುತ್ತದೆ. ಕೂಡಲೇ ರೋಗಿಗಳನ್ನು ನೇರವಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಎಂದು ಶಾಸಕ ಪ್ರಕಾಶ್ ಸಲಹೆ ನೀಡಿದ್ದಾರೆ. 
 
ಶಾಸಕ ಪ್ರಕಾಶ್ ಭಾಷಣದಿಂದ ಗರಂ ಆದ ಆರೋಗ್ಯ ಸಚಿವ ರಮೇಶ್ ಕುಮಾರ್ ತಮ್ಮ ಭಾಷಣದಲ್ಲಿ ಪ್ರಕಾಶ್‌ರನ್ನು ತರಾಟೆಗೆ ತೆಗೆದುಕೊಂಡು, ಬಾಯಿಗೆ ಬಂದಂತೆ ಮಾತನಾಡಬೇಡ. ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಆಸ್ಪತ್ರೆಗಳನ್ನು ಸುಧಾರಣೆ ಮಾಡಲಾಗಿದೆ ಎಂದರು.
 
ವರ್ತೂರ್ ಪ್ರಕಾಶ್ ನಿನಗೇನು ಗೊತ್ತು ಸರಕಾರಿ ಆಸ್ಪತ್ರೆಯ ಸ್ಥಿತಿ? ನಿನ್ನ ಹತ್ತಿರ ದುಡ್ಡು ಇದ್ದರೆ ಎಲ್ಲಿಗೆ ಬೇಕಾದ್ರೂ ಹೋಗಿ ಚಿಕಿತ್ಸೆ ಪಡೆಯಿರಿ. ನಿಮಗೆ ಕಡುಬಡವರ ಕಷ್ಟ ಗೊತ್ತಿಲ್ಲ ಎಂದು ಸಚಿವ ರಮೇಶ್ ಕುಮಾರ್ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments