Select Your Language

Notifications

webdunia
webdunia
webdunia
webdunia

ರಾಷ್ಟ ಮಟ್ಟದ ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದ ಸಚಿವ ಆರ್.ವಿ.ದೇಶಪಾಂಡೆ

ರಾಷ್ಟ ಮಟ್ಟದ ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದ ಸಚಿವ ಆರ್.ವಿ.ದೇಶಪಾಂಡೆ
ಕಾರವಾರ , ಬುಧವಾರ, 31 ಅಕ್ಟೋಬರ್ 2018 (15:41 IST)
ಕಾರ್ಯಕ್ರಮದಲ್ಲಿ ಕ್ರೀಡಾ ವಸ್ತುಗಳನ್ನು ಪಡೆಯಲು ತಡವಾಗಿ ಬಂದ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ಕೈಗೆ ನೀಡುವ ಬದಲು ವೇದಿಕೆಯಿಂದ ಮಕ್ಕಳ ಬಳಿ ಸಚಿವರು ಎಸೆದ ದರ್ಪ ತೋರಿದ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಈ ಘಟನೆ ನಡೆದಿದೆ. ವೇದಿಕೆಯಿಂದ ಕೆಳಗೆ ಕ್ರೀಡಾ ಸಾಮಗ್ರಿ ಪಡೆಯಲು ಬಂದ ಮಕ್ಕಳಿಗೆ ದರ್ಪದಿಂದ ಎಸೆದವರು ಮತ್ಯಾರೂ ಅಲ್ಲ, ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಉ.ಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ. 

ಹಳಿಯಾಳದಲ್ಲಿ  ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ  ಸಾಧನೆ ತೋರಿದ ಕ್ರೀಡಾ ಪಟುಗಳು, ಕ್ರೀಡಾ ಸಂಘಗಳಿಗೆ ಕ್ರೀಡಾ ಸಾಮಗ್ರಿ ವಿತರಣೆ ವೇಳೆ ಈ ಘಟನೆ ನಡೆದಿದೆ. ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ದರ್ಪ ತೋರುವ ಮೂಲಕ ಅಗೌರವ ತೋರಿದ್ದಾರೆ ಎಂದು ಕ್ರೀಡಾಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ರೈತನ ಮೇಲೆ ಅಧಿಕಾರಿಗಳಿಂದ ಸಾಮೂಹಿಕ ಹಲ್ಲೆ: ಐವರ ಮೇಲೆ ಎಫ್ ಐ ಆರ್