ಮೇ 3 ರವರೆಗೂ ಸೀಲ್ ಡೌನ್ ಎಂದ ಸಚಿವ

Webdunia
ಮಂಗಳವಾರ, 28 ಏಪ್ರಿಲ್ 2020 (21:41 IST)
ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಮಹಾಮಾರಿ ಕೋವಿಡ್-19 ಸೋಂಕು ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಮಾತನಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 20 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 300 ಪ್ರಕರಣಗಳು ಸಕ್ರಿಯ  ಪ್ರಕರಣಗಳು ಇವೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 18 ಸೋಂಕಿತರ ಪೈಕಿ ಇಬ್ಬರು ಮೃತ ಪಟ್ಟಿದ್ದಾರೆ. ಒಟ್ಟು  11 ಮಂದಿ ಗುಣಮುಖರಾಗಿದ್ದಾರೆ.  5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಪ್ರಕರಣಗಳಿಂತಲೂ ಹೆಚ್ಚು ಸೋಂಕಿತರ ಸಂಖ್ಯೆ ಇದ್ದಲ್ಲಿ  ಅಂತಹ ಜಿಲ್ಲೆಗಳನ್ನು ರೆಡ್‌ ಝೋನ್ ವಲಯವಾಗಿ ಗುರುತಿಸಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಸದ್ಯ 5 ಪ್ರಕರಣಗಳು ಮಾತ್ರ ಇವೆ ಎಂದರು.

ನೆರೆಯ ಆಂಧ್ರಪ್ರದೇಶದ ಹಿಂದೂಪುರ ಸಂಪೂರ್ಣ ರೆಡ್‌ ಝೋನ್ ಆಗಿರುವುದರಿಂದ, ಆಂಧ್ರದ ಗಡಿಯಲ್ಲಿ  ಚಿಕ್ಕಬಳ್ಳಾಪುರ ಜಿಲ್ಲೆ ಇರುವುದರಿಂದ ಮೇ 3 ರ ವರೆಗೂ ಲಾಕ್‌ಡೌನ್ ಮುಂದುವರೆಸಲಾಗುವುದು. ಅದೇ ರೀತಿ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ನಗರದಲ್ಲಿ ಜಾರಿಯಲ್ಲಿರುವ ಸೀಲ್‌ ಡೌನ್‌ನ್ನು ಮೇ 3 ರವರೆಗೂ  ಮುಂದುವರೆಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments