ಮೇ 3 ರವರೆಗೂ ಸೀಲ್ ಡೌನ್ ಎಂದ ಸಚಿವ

Webdunia
ಮಂಗಳವಾರ, 28 ಏಪ್ರಿಲ್ 2020 (21:41 IST)
ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಮಹಾಮಾರಿ ಕೋವಿಡ್-19 ಸೋಂಕು ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹೇಳಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಮಾತನಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 20 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 300 ಪ್ರಕರಣಗಳು ಸಕ್ರಿಯ  ಪ್ರಕರಣಗಳು ಇವೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 18 ಸೋಂಕಿತರ ಪೈಕಿ ಇಬ್ಬರು ಮೃತ ಪಟ್ಟಿದ್ದಾರೆ. ಒಟ್ಟು  11 ಮಂದಿ ಗುಣಮುಖರಾಗಿದ್ದಾರೆ.  5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಪ್ರಕರಣಗಳಿಂತಲೂ ಹೆಚ್ಚು ಸೋಂಕಿತರ ಸಂಖ್ಯೆ ಇದ್ದಲ್ಲಿ  ಅಂತಹ ಜಿಲ್ಲೆಗಳನ್ನು ರೆಡ್‌ ಝೋನ್ ವಲಯವಾಗಿ ಗುರುತಿಸಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಸದ್ಯ 5 ಪ್ರಕರಣಗಳು ಮಾತ್ರ ಇವೆ ಎಂದರು.

ನೆರೆಯ ಆಂಧ್ರಪ್ರದೇಶದ ಹಿಂದೂಪುರ ಸಂಪೂರ್ಣ ರೆಡ್‌ ಝೋನ್ ಆಗಿರುವುದರಿಂದ, ಆಂಧ್ರದ ಗಡಿಯಲ್ಲಿ  ಚಿಕ್ಕಬಳ್ಳಾಪುರ ಜಿಲ್ಲೆ ಇರುವುದರಿಂದ ಮೇ 3 ರ ವರೆಗೂ ಲಾಕ್‌ಡೌನ್ ಮುಂದುವರೆಸಲಾಗುವುದು. ಅದೇ ರೀತಿ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ನಗರದಲ್ಲಿ ಜಾರಿಯಲ್ಲಿರುವ ಸೀಲ್‌ ಡೌನ್‌ನ್ನು ಮೇ 3 ರವರೆಗೂ  ಮುಂದುವರೆಸಲಾಗುವುದು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments