Publish Date: Sat, 06 Oct 2018 (10:21 IST)
Updated Date: Sat, 06 Oct 2018 (10:25 IST)
ಮೈಸೂರು: ಒಳ್ಳೆ ಮುಹೂರ್ತ ನೋಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆಂದು ಕೆಪಿಜೆಪಿ ಪಕ್ಷದಿಂದ ಶಾಸಕನಾಗಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಸಚಿವ ಶಂಕರ್ ಹೇಳಿದ್ದಾರೆ.
‘ನಾನು ಕಾಂಗ್ರೆಸ್ ಸೇರಬೇಕೆಂದು ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ. ಅವರ ಮಾತಿನಂತೆ ನಡೆದುಕೊಳ್ಳುತ್ತೇನೆ. ಸದ್ಯದಲ್ಲೇ ಒಳ್ಳೆಯ ಮುಹೂರ್ತ ನೋಡಿ ಪಕ್ಷದ ಸದಸ್ಯತ್ವ ಪಡೆದುಕೊಳ್ಳುತ್ತೇನೆ’ ಎಂದು ಸಚಿವ ಶಂಕರ್ ಹೇಳಿದ್ದಾರೆ.
ಈ ಬಾರಿ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಶಂಕರ್ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಸಚಿವ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಉಪಾಹಾರ ಕೂಟದಲ್ಲಿ ಪಾಲ್ಗೊಂಡಿದ್ದ ಶಂಕರ್ ಈ ಬಗ್ಗೆ ಏನೂ ಚರ್ಚೆಯಾಗಿಲ್ಲ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.