Webdunia - Bharat's app for daily news and videos

Install App

ಸಚಿವ ಡಾ.ಶರಣಪ್ರಕಾಶ ಪಾಟೀಲ್ ಗೈರಿಗೆ ಸದನದಲ್ಲಿ ಆಕ್ಷೇಪ

Webdunia
ಗುರುವಾರ, 8 ಫೆಬ್ರವರಿ 2018 (20:42 IST)
ವಿಧಾನಸಭೆಯಲ್ಲಿ ನಡೆದ ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಗೈರು ಹಾಜರಿಯಾಗಿದ್ದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗಳು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಸಂಬಂಧಪಟ್ಟಿದ್ದವು. ಆದರೆ, ಯು.ಟಿ.ಖಾದರ್ ಅವರು ಉತ್ತರಿಸುತ್ತಿದ್ದರು. ಈ ವೇಳೆ ಸಂಬಂಧಪಟ್ಟ ಸಚಿವರು ಉತ್ತರ ನೀಡಿದರೆ ಸ್ಪಷ್ಟತೆ ಇರುತ್ತದೆ ಎಂದು ಲಕ್ಷ್ಮಣ ಸವದಿ ಹೇಳಿ, ಸಚಿವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ವೈಯಕ್ತಿಕ ಕೆಲಸಕ್ಕಾಗಿ ಸಭಾಧ್ಯಕ್ಷರ  ಅನುಮತಿ ಪಡೆದು ಹೋಗಿದ್ದಾರೆ ಎಂದು ಖಾದರ್ ಅವರು ತಿಳಿಸಿದರು. ಸಭಾಧ್ಯಕ್ಷರು ಅನುಮತಿ ಪಡೆದಿರುವುದು ಖಚಿತ ಪಡಿಸಿದರು. ಗೋವಿಂದ ಕಾರಜೋಳ ಮಾತನಾಡಿ ವೈಯಕ್ತಿಕ ಕೆಲಸವಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ. ಸದನದ ಕೆಲಸ ಪವಿತ್ರವಾದುದು ಖಾಸಗಿ  ವ್ಯವಹಾರಗಳಿಗಾಗಿ ಗೈರು  ಆಗುವುದು ಸರಿಯಲ್ಲ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments