Webdunia - Bharat's app for daily news and videos

Install App

ಬರಗಾಲ ಬರಲಿ ಎಂದು ರೈತರು ಕಾಯ್ತಿದ್ದಾರೆ: ಶಿವಾನಂದ ಪಾಟೀಲ್ ಹೇಳಿಕೆ ಕಾಂಗ್ರೆಸ್ ಗೆ ಮುಳ್ಳು

Webdunia
ಸೋಮವಾರ, 25 ಡಿಸೆಂಬರ್ 2023 (13:06 IST)
Photo Courtesy: Twitter
ಬೆಂಗಳೂರು: ಬರಗಾಲ ಬರಲಿ ಎಂದು ರೈತರು ಕಾಯ್ತಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಈಗ ಆಡಳಿತಾರೂಢ ಕಾಂಗ್ರೆಸ್ ಮುಳ್ಳಾಗಿದೆ.

ಸಚಿವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಪದೇ ಪದೇ ರೈತರಿಗೆ ಅವಮಾನ ಮಾಡುತ್ತಿರುವುದಕ್ಕೆ ಸಚಿವರ ಈ ಹೇಳಿಕೆಯೇ ಸಾಕ್ಷಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸರ್ಕಾರ ಕರೆಂಟು, ನೀರು, ಗೊಬ್ಬರ ಎಲ್ಲಾ ಫ್ರೀ ಆಗಿ ಕೊಟ್ಟಿದೆ. ರೈತರು ಬರಗಾಲ ಬರಲಿ ಎಂದು ಕಾಯ್ತಿದ್ದಾರೆ. ಬರಗಾಲ ಎಂದರೆ ರೈತರು ಸಾಲ ಮನ್ನಾ ಆಗುತ್ತದೆ ಎಂದು ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಆದರೆ ಕಷ್ಟದಲ್ಲಿರುವಾಗ ಸಾಲಮನ್ನಾ ಹೇಗೆ ಸಾಧ‍್ಯ? ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ರೈತರು ಬೆಳೆ ಬೆಳೆಯುವುದರತ್ತ ಗಮನ ಹರಿಸಬೇಕು ಎಂದು ಹಗುರವಾಗಿ ಮಾತನಾಡಿದ್ದರು.

ಈ ವಿಚಾರ ಈಗ ಕಾಂಗ್ರೆಸ್ ಗೇ ಮುಳುವಾಗಿದೆ. ಸಚಿವರ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೂ ಮುಜುಗರವಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಇಂತಹ ದುರಹಂಕಾರ ಒಳ್ಳೆಯದಲ್ಲ. ಈ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ. ಇದು ಹೆಚ್ಚು ದಿನ ಉಳಿಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments