Webdunia - Bharat's app for daily news and videos

Install App

ಕನ್ನಡ ಬರೆಯಲು ಬರಲ್ಲ ಎಂದು ಟ್ರೋಲ್ ಮಾಡಿದವರಿಗೇ ಸಚಿವ ಶಿವರಾಜ್ ತಂಗಡಗಿ ತರಾಟೆ

Krishnaveni K
ಗುರುವಾರ, 6 ಫೆಬ್ರವರಿ 2025 (11:48 IST)
ಬೆಂಗಳೂರು: ಇತ್ತೀಚೆಗೆ ಸರ್ಕಾರೀ ಶಾಲಾ ಕಾರ್ಯಕ್ರಮವೊಂದರಲ್ಲಿ ಕನ್ನಡ ಬರೆಯಲು ಪರದಾಡಿದ್ದಕ್ಕೆ ಟ್ರೋಲ್ ಆಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿಡಿಯೋ ವೈರಲ್ ಮಾಡಿದವರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೇಳಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಸಚಿವ. ಆದರೆ ಶಿವರಾಜ್ ತಂಗಡಗಿ ಇತ್ತೀಚೆಗೆ ಸರ್ಕಾರೀ ಶಾಲಾ ಕಾರ್ಯಕ್ರಮದಲ್ಲಿ ಶುಭವಾಗಲಿ ಎಂದು ಕನ್ನಡದಲ್ಲಿ ಬರೆಯಲು ಪರದಾಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿದ್ದುಕೊಂಡೇ ಈ ರೀತಿ ಆಗಿದ್ದರೆ ಉಳಿದವರ ಕತೆ ಏನು ಎಂದು ಟ್ರೋಲ್ ಮಾಡಿದ್ದರು. ಇದು ಸಚಿವರ ಗಮನಕ್ಕೂ ಬಂದಿದ್ದು ಗರಂ ಆಗಿ ಮಾಧ್ಯಮಗಳ ಮುಂದೆ ಹರಿಹಾಯ್ದಿದ್ದಾರೆ.

ನಾನು ಅಷ್ಟೇನೂ ದಡ್ಡನಲ್ಲ. ಡಿಗ್ರಿ ಓದಿದವನು. ಪೂರಾ ಬರೆಯುವುದನ್ನು ನೋಡಲೂ ವಿಡಿಯೋ ಮಾಡಿದವರಿಗೆ ತಾಳ್ಮೆಯಿಲ್ಲ. ಕನ್ನಡ ಬರೆಯಲೂ ಬರಲ್ಲ ಎಂದರೆ ನಾನು ಇಷ್ಟು ಸಮಯ ಓದಿದ್ದೇನು. ಬರಿಯುವಾಗ ಏನು ಬರೆಯಬೇಕು ಎನ್ನುವ ಕಾಮನ್ ಸೆನ್ಸ್ ನನಗೂ ಇದೆ’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments