Webdunia - Bharat's app for daily news and videos

Install App

ಕನ್ನಡ ಬರೆಯಲು ಬರಲ್ಲ ಎಂದು ಟ್ರೋಲ್ ಮಾಡಿದವರಿಗೇ ಸಚಿವ ಶಿವರಾಜ್ ತಂಗಡಗಿ ತರಾಟೆ

Krishnaveni K
ಗುರುವಾರ, 6 ಫೆಬ್ರವರಿ 2025 (11:48 IST)
ಬೆಂಗಳೂರು: ಇತ್ತೀಚೆಗೆ ಸರ್ಕಾರೀ ಶಾಲಾ ಕಾರ್ಯಕ್ರಮವೊಂದರಲ್ಲಿ ಕನ್ನಡ ಬರೆಯಲು ಪರದಾಡಿದ್ದಕ್ಕೆ ಟ್ರೋಲ್ ಆಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿಡಿಯೋ ವೈರಲ್ ಮಾಡಿದವರನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೇಳಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಸಚಿವ. ಆದರೆ ಶಿವರಾಜ್ ತಂಗಡಗಿ ಇತ್ತೀಚೆಗೆ ಸರ್ಕಾರೀ ಶಾಲಾ ಕಾರ್ಯಕ್ರಮದಲ್ಲಿ ಶುಭವಾಗಲಿ ಎಂದು ಕನ್ನಡದಲ್ಲಿ ಬರೆಯಲು ಪರದಾಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕನ್ನಡ ಮತ್ತು ಸಂಸ್ಕೃತಿ ಸಚಿವನಾಗಿದ್ದುಕೊಂಡೇ ಈ ರೀತಿ ಆಗಿದ್ದರೆ ಉಳಿದವರ ಕತೆ ಏನು ಎಂದು ಟ್ರೋಲ್ ಮಾಡಿದ್ದರು. ಇದು ಸಚಿವರ ಗಮನಕ್ಕೂ ಬಂದಿದ್ದು ಗರಂ ಆಗಿ ಮಾಧ್ಯಮಗಳ ಮುಂದೆ ಹರಿಹಾಯ್ದಿದ್ದಾರೆ.

ನಾನು ಅಷ್ಟೇನೂ ದಡ್ಡನಲ್ಲ. ಡಿಗ್ರಿ ಓದಿದವನು. ಪೂರಾ ಬರೆಯುವುದನ್ನು ನೋಡಲೂ ವಿಡಿಯೋ ಮಾಡಿದವರಿಗೆ ತಾಳ್ಮೆಯಿಲ್ಲ. ಕನ್ನಡ ಬರೆಯಲೂ ಬರಲ್ಲ ಎಂದರೆ ನಾನು ಇಷ್ಟು ಸಮಯ ಓದಿದ್ದೇನು. ಬರಿಯುವಾಗ ಏನು ಬರೆಯಬೇಕು ಎನ್ನುವ ಕಾಮನ್ ಸೆನ್ಸ್ ನನಗೂ ಇದೆ’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments