Webdunia - Bharat's app for daily news and videos

Install App

ಕನ್ನಡ ಬರೆಯಲು ಪರದಾಡಿದ ಸಚಿವ ಶಿವರಾಜ್ ತಂಗಡಗಿ: ಹೀಗಾದ್ರೆ ಉದ್ದಾರ ಎಂದ ನೆಟ್ಟಿಗರು (ವಿಡಿಯೋ)

Krishnaveni K
ಭಾನುವಾರ, 2 ಫೆಬ್ರವರಿ 2025 (13:34 IST)
ಕೊಪ್ಪಳ: ಹೆಸರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆದರೆ ಶಿವರಾಜ್ ತಂಗಡಗಿ ಕನ್ನಡದಲ್ಲಿ ಒಂದಕ್ಷರ ಬರೆಯಲು ತಡಕಾಡುವುದು ನೋಡಿ ನೆಟ್ಟಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿಯ ಸರ್ಕಾರೀ ಶಾಲೆಯೊಂದಕ್ಕೆ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮವೊಂದನ್ನು ಉದ್ಘಾಟಿಸಿ ಬೋರ್ಡ್ ಮೇಲೆ ಶುಭವಾಗಲಿ ಎಂಬ ಶಬ್ಧ ಬರೆಯಲು ಹೇಳಲಾಯಿತು.

ಅದರಂತೆ ಸಚಿವರು ಚೋಕ್ ತೆಗೆದುಕೊಂಡು ಬರೆಯಲು ಹೊರಟೇ ಬಿಟ್ಟರು. ಆದರೆ ಶು ಎಂಬ ಮೊದಲ ಪದ ಬರೆಯುವಷ್ಟರಲ್ಲಿ ಸುಸ್ತಾದರು. ಬಳಿಕ ಭ ಬದಲು ಇನ್ನೇನೋ ಬರೆದರು. ಅಲ್ಲಿದ್ದವರು ಸಚಿವರನ್ನು ತಿದ್ದಿ ಹಂಗೋ ಹಿಂಗೋ ಶುಭವಾಗಲಿ ಎಂದು ತಪ್ಪು ತಪ್ಪಾಗಿ ಬರೆದರು.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಎಂಬ ಹೆಸರಿಟ್ಟುಕೊಂಡು ಕನ್ನಡದಲ್ಲಿ ಒಂದು ಪದ ಬರೆಯಲು ಬರಲ್ಲಾ ಎಂದರೆ ಉದ್ದಾರ ಎಂದು ಟೀಕಿಸಿದ್ದಾರೆ. ಆ ವೈರಲ್ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments