Webdunia - Bharat's app for daily news and videos

Install App

ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ: ಸಚಿವ ಸೋಮಣ್ಣ ಹೇಳಿದ್ದೇನು

Krishnaveni K
ಮಂಗಳವಾರ, 1 ಏಪ್ರಿಲ್ 2025 (16:05 IST)
ತುಮಕೂರು: ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕುರಿತು ಇಂದು ಸಚಿವ ಸೋಮಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.

ಇಂದು ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯವರ ಜನ್ಮ ಜಯಂತಿ ಪ್ರಯುಕ್ತ ಇಂದು ಸಿದ್ಧಗಂಗಾ ಮಠದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿ ಮಾತನಾಡಿದರು. ಈ ವೇಳೆ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡ್ತೀರಾ ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಭಾರತ ಸರ್ಕಾರ ಶ್ರೀ ಮಠದ ಬಗ್ಗೆ ವಿಶೇಷವಾದ ಭಕ್ತಿ ಹೊಂದಿದೆ. ಅದರಲ್ಲೂ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶ್ರೀಗಳಿದ್ದಾಗ ಮತ್ತು ಶ್ರೀಗಳು ಹೋದ ಬಳಿಕವೂ ಗದ್ದುಗೆಗೆ ಬಂದು ಆಶೀರ್ವಾದ ಪಡೆದು ಹೋಗಿದ್ದಾರೆ.

ಶ್ರೀ ಮಠದಲ್ಲಿ ಪೂಜ್ಯರು ಈಗಲೂ ಇದ್ದಾರೆ ಎಂಬ ನಂಬಿಕೆಯಿದೆ. ತಪಸ್ವಿ, ಪವಾಡ ಸದೃಶ ಸ್ವಾಮೀಜಿಗಳಿಗೆ ಭಾರತ ರತ್ನ ಕೊಡಬೇಕು ಎಂದು ಮೊದಲಿನಿಂದಲೂ ನಾವು ಮನವಿ ಮಾಡುತ್ತಲೇ ಬಂದಿದ್ದೇವೆ. ಶ್ರೀಗಳಿಗೆ ಭಾರತ ರತ್ನ ಕೊಟ್ಟರೆ ಆ ಪದವಿಗೆ ಗೌರವ ಬರುತ್ತದೆ. ಶ್ರೀಗಳು ಭಾರತ ರತ್ನ ಅಲ್ಲ, ವಿಶ್ವದ ರತ್ನ ಆಗಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments