Webdunia - Bharat's app for daily news and videos

Install App

ಆಪರೇಷನ್​ ಕಮಲದ ಸುಳಿವು ನೀಡಿದ ಸಚಿವ ಸೋಮಶೇಖರ್

Webdunia
ಭಾನುವಾರ, 15 ಮೇ 2022 (07:30 IST)
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಶತಾಯಗತಾಯವಾಗಿ ಅಧಿಕಾರ ಹಿಡಿಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲ್ಲಿ ಬಿಜೆಪಿ ಹವಾ ಇಲ್ಲವೋ ಅಲ್ಲಿ ಆಪರೇಷನ್ ಕಮಲ ಮಾಡುತ್ತಿದೆ.
 
ಅದರಲ್ಲೂ ಪ್ರಮುಖವಾಗಿ ಈ ಬಾರಿ ಬಿಜೆಪಿ ಹಳೇ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ನೀಡಿದ್ದು, ಈ ಭಾಗದಲ್ಲಿ ಪ್ರಮುಖ ಬೇರೆ ಪಕ್ಷದ ನಾಯಕರನ್ನು ಸೆಳೆಯಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಆಪರೇಷನ್ ಕಮಲದ ಬಗ್ಗೆ ಸ್ವತಃ ಸಚಿವ ಎಸ್‌ಟಿ ಸೋಮಶೇಖರ್ ಸುಳಿವು ನೀಡಿದ್ದು, 2ನೇ ಹಂತದ ಆಪರೇಷನ್​ಗೆ ಕಮಲ ಫಿಕ್ಸ್ ಆಗಿದ್ದು, ಶೀಘ್ರದಲ್ಲೇ ಈ ಭಾಗದ ಘಟಾನುಘಟಿ ನಾಯಕರು ಬಿಜೆಪಿಗೆ ಸೇರ್ಪಡೆಯಾಲಿದ್ದಾರೆ ಎಂದಿದ್ದಾರೆ.
 
ಕಾಂಗ್ರೆಸ್​, ಜೆಡಿಎಸ್​ನ ಪ್ರಮುಖ ನಾಯಕರು ಬಿಜೆಪಿ ಸೇರಲಿದ್ದಾರೆ. ಆ ನಾಯಕರು ಯಾರೆಂದು ಈಗಲೇ ಹೇಳಲಾಗಲ್ಲ. ಅಂತಹ ನಾಯಕರ ಜೊತೆ ಕೊನೆ ಹಂತದ ಮಾತುಕತೆ ನಡೆಯುತ್ತಿದೆ. ಯಾವುದೇ ಷರತ್ತುಗಳಿಲ್ಲದೇ ಪಕ್ಷ ಸೇರಲು ನಾಯಕರು ಒಪ್ಪಿದ್ದಾರೆ. ಪಕ್ಷ ಸೇರಲು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಅನುಮತಿ ಬಾಕಿಯಿದೆ ಎಂದು ಹೇಳಿದರು.
 
ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ  ಹೇಳಿದ್ದಾರೆ. ಅಲ್ಲದೇ ಜಿಟಿಡಿ ಪುತ್ರನಿಗೆ ಕ್ಷೇತ್ರ ಬಿಟ್ಟುಕೊಡುವುದಾಗಿ  ತಿಳಿಸಿದ್ದಾರೆ.
 
ಜಿಟಿಡಿ ಪುತ್ರನಿಗೆ ಟಿಕೆಟ್ ನೀಡಲು ಹೈಕಮಾಂಡ್​ನಿರ್ಧರಿಸಿದರೆ ಚಾಮರಾಜ ಕ್ಷೇತ್ರ ಬಿಟ್ಟುಕೊಡಲು ಸಿದ್ಧ ಬಿಜೆಪಿ ಬಂದು ಈ ಭಾಗದಲ್ಲಿ 8 ಸ್ಥಾನ ಗೆಲ್ಲಿಸೋದಾದ್ರೆ, ಪಕ್ಷಕ್ಕಾಗಿ ಕ್ಷೇತ್ರ ಸೇರಿದಂತೆ ಯಾವುದೇ ತ್ಯಾಗಕ್ಕೂ ನಾನು ಸಿದ್ಧ. ಬಿಜೆಪಿಗೆ ಘಟಾನುಘಟಿ ನಾಯಕರು ಸೇರುತ್ತಾರೆ ಎಂದು ಸಚಿವ ಸೋಮಶೇಖರ್ ಹೇಳಿಕೆಗೆ ಶಾಸಕ ನಾಗೇಂದ್ರ ಪುಷ್ಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಮುಂದಿನ ಸುದ್ದಿ
Show comments